ತುಳು ವಿಚಾರಗೋಷ್ಠಿಗೆ ದೆಹಲಿ ಜೆಎನ್ಯು ನಿವೃತ್ತ ಪ್ರಾಧ್ಯಾಪಕ ಡಾ. ಪುರುಷೋತ್ತಮ ಬಿಳಿಮಲೆ ಅವರನ್ನು ಆಹ್ವಾನಿಸಲಾಗಿದ್ದು, ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ನ ಸದಸ್ಯರೊಬ್ಬರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಪಡಿಸಲಾಗಿದೆ ಎನ್ನಲಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ವಿರೋಧ ವ್ಯಕ್ತಪಡಿಸಿದ ಸಿಂಡಿಕೇಟ್ ಸದಸ್ಯರ ಹೆಸರು ಬಹಿರಂಗಪಡಿಸಬೇಕು ಹಾಗೂ ಗೋಷ್ಠಿಯನ್ನು ರದ್ದು ಮಾಡಲು ನಿರ್ಧರಿಸಿದವರ ಹೆಸರನ್ನೂ ಬಹಿರಂಗಪಡಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.