ಏಪ್ರಿಲ್ 8ರಿಂದ ಮಾರುಕಟ್ಟೆಯಲ್ಲಿನ ವರ್ತಕರನ್ನು ಬೈಕಂಪಾಡಿಯ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸಲಾಗಿತ್ತು. ಅದೇ ವೇಳೆ ಸೆಂಟ್ರಲ್ ಮಾರುಕಟ್ಟೆಯ ಹಳೆ ಕಟ್ಟಡಗಳನ್ನು ನೆಲಸಮಗೊಳಿಸಲು ಮಂಗಳೂರು ಮಹಾನಗರ ಪಾಲಿಕೆ ಆಡಳಿತ ತೀರ್ಮಾನ ಕೈಗೊಂಡಿತ್ತು. ಈ ನಿರ್ಧಾರ ಪ್ರಶ್ನಿಸಿ ವರ್ತಕರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಟ್ಟಡ ತೆರವು ಮಾಡುವ ತೀರ್ಮಾನಕ್ಕೆ ಹೈಕೋರ್ಟ್ ತಡೆ ನೀಡಿತ್ತು.