ಈ ಬಗ್ಗೆ ಮಾಹಿತಿ ನೀಡಿರುವ ನಗರ ಪೊಲೀಸ್ ಕಮಿಷನರ್ ಶಶಿಕುಮಾರ್, ನಗರದಲ್ಲಿ ಜನರು ಕರ್ಫ್ಯೂಗೆ ಉತ್ತಮ ಸಹಕಾರ ನೀಡುತ್ತಿದ್ದಾರೆ. ಆದರೆ 10 ಗಂಟೆಗೆ ಅಂಗಡಿ, ಹೋಟೆಲ್ಗಳನ್ನು ಬಂದ್ ಮಾಡಿದರೆ, ಹೊಟೇಲ್ ಮಾಲೀಕರು, ಸಿಬ್ಬಂದಿ, ಅಂಗಡಿ ಮಾಲೀಕರು, ಸಿಬ್ಬಂದಿ ಮನೆಗೆ ತೆರಳುವಾಗ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ. ಆದ್ದರಿಂದ 10 ಗಂಟೆಗೆ ಮೊದಲೇ ಮನೆಗೆ ತಲುಪುವಂತೆ ನೋಡಿಕೊಂಡು ಹೊಟೇಲ್, ಅಂಗಡಿಗಳನ್ನು ಮುಚ್ಚಬೇಕು ಎಂದು ತಿಳಿಸಿದ್ದಾರೆ.