ಮಂಗಳೂರು: ವಿಧಾನಸಭೆಯ ವಿರೋಧಪಕ್ಷದ ಉಪನಾಯಕ ಯು.ಟಿ.ಖಾದರ್ ಗೆಕೋವಿಡ್ ದೃಢಪಟ್ಟಿದೆ. ಅವರು ಮೂರು ದಿನಗಳ ಕಾಲ ತಮ್ಮ ಎಲ್ಲಾ ನಿಗದಿತ ಕಾರ್ಯಕ್ರಮಗಳು ರದ್ದುಪಡಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿರವರು ಮಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಸಕರುಗಳಿಗೆ ಆರ್ಟಿಪಿಸಿಆರ್ ಪರೀಕ್ಷಾ ವರದಿ ಕಡ್ಡಾಯ ಪಡಿಸಲಾಗಿತ್ತು.ಇದರಿಂದಾಗಿ ಗುರುವಾರ ರಾತ್ರಿ ಶಾಸಕ ಯು.ಟಿ.ಖಾದರ್ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ರೋಗದ ಯಾವುದೇ ಗುಣಲಕ್ಷಣ ಇಲ್ಲದೇ ಇದ್ದರೂ ಅವರಿಗೆ ಸೋಂಕು ಇದೆ ಎಂಬ ವರದಿ ಬಂದಿದ್ದು ವೈದ್ಯರ ಸಲಹೆಯಂತೆ 3 ದಿನಗಳ ಪ್ರತ್ಯೇಕ ವಾಸಕ್ಕೆ ಒಳಗಾಗಲಿದ್ದಾರೆ. ಆದ್ದರಿಂದ ಯಾರನ್ನೂ ಭೇಟಿಯಾಗಲು ಸಾಧ್ಯವಾಗುವುದಿಲ್ಲ.ಅಲ್ಲದೆ ಈ ಮೂರು ದಿವಸಗಳಲ್ಲಿ ನಿಗದಿಪಡಿಸಿದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕರು ಮೂರು ದಿನಗಳ ಕಾಲ ಸಾರ್ವಜನಿಕರ ಸೇವೆಗೆ ಅಲಭ್ಯರಾಗಿದ್ದು,ಅಗತ್ಯ ಬಿದ್ದಲ್ಲಿ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.
ನಿಮ್ಮೆಲ್ಲರ ಹಾರೈಕೆಗಳೊಂದಿಗೆ ಆದಷ್ಟು ಶೀಘ್ರವೇ ಗುಣಮುಖನಾಗಿ, ಮತ್ತೆ ನನ್ನ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳುವ ವಿಶ್ವಾಸವಿದ್ದು, ಯಾರೂ ಆತಂಕ ಪಡುವ ಆಗತ್ಯವಿಲ್ಲವೆಂದು ಶಾಸಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.