ಅರಾಫತ್ ಅಲಿಯಿಂದ ಪ್ರಚೋದನೆಗೆ ಒಳಗಾಗಿದ್ದ ಶಾರಿಕ್ ಕುಕ್ಕರ್ ಬಾಂಬ್ ಸ್ಫೋಟಿಸಲು ಸಿದ್ಧತೆ ನಡೆಸಿದ್ದ. ಇದಕ್ಕೂ ಮೊದಲು ನಗರದಲ್ಲಿ ಉಗ್ರರ ಕೃತ್ಯಕ್ಕೆ ಸಂಬಂಧಿಸಿದ ಗೋಡೆ ಬರಹ ಪ್ರಕರಣ ದಾಖಲಾಗಿತ್ತು. ಆರೋಪಿಗಳಾದ ಮಾಝ್ ಮುನೀರ್ ಮತ್ತು ಯಾಸೀನ್ ಈ ಕೃತ್ಯದಲ್ಲಿ ಭಾಗಿಯಾಗಿದ್ದರು. ಇವರಿಗೂ ಅರಾಫತ್ ಪ್ರೇರಣೆ ನೀಡಿದ್ದ. ಆ ನಂತದಲ್ಲಿ ಶಿವಮೊಗ್ಗದಲ್ಲಿ ಸ್ಫೋಟಿಸುವ ಪ್ರಯೋಗ ನಡೆದಿತ್ತು. ಅಂತಿಮವಾಗಿ ಕುಕ್ಕರ್ ಬಾಂಬ್ ಸ್ಫೋಟಿಸಲು ಶಾರಿಕ್ ಸಂಚು ರೂಪಿಸಿದ್ದ. 2022 ನವೆಂಬರ್ 19ರಂದು ಕುಕ್ಕರ್ ಬಾಂಬ್ ಹಿಡಿದು ಆಟೊರಿಕ್ಷಾದಲ್ಲಿ ತರುವ ವೇಳೆ ಅದು ಸ್ಫೋಟಗೊಂಡಿತ್ತು. ಆದರೆ, ಆಗ ಶಾರಿಕ್ ಗುರಿ ಯಾವುದಿತ್ತು ಎಂಬ ಬಗ್ಗೆ ಸ್ಪಷ್ಟತೆ ದೊರೆತಿರಲಿಲ್ಲ. ಬಾಂಬ್ ಸ್ಫೋಟದಲ್ಲಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದ ಶಾರಿಕ್, ಗುಣಮುಖನಾದ ಮೇಲೆ ಎನ್ಐಎ ತಂಡ ಆತನನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿತ್ತು.