ಈ ಬಗ್ಗೆ ಶನಿವಾರ ಇಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಾಜಿ ಶಾಸಕ ಜೆ.ಆರ್.ಲೋಬೊ, ' ಕೊರೊನಾ ಪರಿಣಾಮ ಸಂಕಷ್ಟದಲ್ಲಿ ಇರುವ ಜನರಿಗೆ ಪಕ್ಷದ ಮುಖಂಡರು ಸ್ಪಂದಿಸುತ್ತಿದ್ದು, ಸಮಿತಿಯು ಸಮನ್ವಯದ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಜನರಿಗೆ ಸರ್ಕಾರದ ವತಿಯಿಂದ ಸಿಗಬೇಕಾದ ಸೌಲಭ್ಯಗಳ ಬಗ್ಗೆಯೂ ನಿಗಾ ವಹಿಸಲಿದ್ದು, ಚ್ಯುತಿ ಕಂಡುಬಂದಲ್ಲಿ ಸರ್ಕಾರವನ್ನು ಎಚ್ಚರಿಸಲಿದೆ' ಎಂದರು.