ಸ್ವಯಂಪ್ರೇರಿತ ಪ್ರಕರಣ: ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅರುಣಾಂಗ್ಷು ಗಿರಿ, ‘ಜಿಲ್ಲಾಧಿಕಾರಿಯವರೇ ದೂರು ನೀಡಿದರೆ ಪ್ರಕರಣ ದಾಖಲಿಸುತ್ತೇವೆ. ಅವರು ದೂರು ನೀಡದಿದ್ದರೆ ನಾವು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸುತ್ತೇವೆ’ ಎಂದು ತಿಳಿಸಿದ್ದಾರೆ.