ಮಂಗಳೂರು: ಜಿಲ್ಲೆಯಾದ್ಯಂತ ಸೋಮವಾರ ಶಾಲೆಗಳು ಆರಂಭವಾಗಿವೆ.
ಮೊದಲ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಶಾಲೆಗೆ ಬಂದಿರುವುದು ಶಿಕ್ಷಕರ ಉತ್ಸಾಹವನ್ನು ಇಮ್ಮಡಿಸಿದೆ.
ಮಕ್ಕಳನ್ನು ಸ್ವಾಗತಿಸಲು ಶಾಲೆಗಳನ್ನು ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು. ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಹೂಮಳೆ ಗರೆದು ಶಿಕ್ಷಕರು, ಸಿಬ್ಬಂದಿ ಸ್ವಾಗತಿಸಿದರು. ಕೆಲವು ಶಾಲೆಗಳಲ್ಲಿ ಮಕ್ಕಳಿಗೆ ಬಲೂನ್, ಪ್ರಾಣಿಗಳ ಮುಖವಾಡ ನೀಡಿ ಬರಮಾಡಿಕೊಳ್ಳಲಾಯಿತು.
ಮಣ್ಣಗುಡ್ಡೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ವಿದ್ಯಾರ್ಥಿಗಳನ್ನು ವಾಹನದಲ್ಲಿ ಮೆರವಣಿಗೆ ಮಾಡಿ ಶಾಲೆಗೆ ಕರೆತರಲಾಯಿತು. ಹಿರಿಯ ವಿದ್ಯಾರ್ಥಿಗಳು, ಕಿರಿಯರನ್ನು ಸ್ಚಾಗತಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.