<p><strong>ಮಂಗಳೂರು</strong>: ಪಟಾಕಿ ಅಂಗಡಿ ಮಾಲೀಕನನ್ನು ಬೆದರಿಸಿ ಸುಲಿಗೆ ಮಾಡಲು ಯತ್ನಿಸಿದ ಇಬ್ಬರ ವಿರುದ್ಧ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್ನ ಫಾಜಿಲ್ ಕೊಲೆ ಆರೋಪಿ, ರೌಡಿಶೀಟರ್ ಪ್ರಶಾಂತ್ ಯಾನೆ ಪಚ್ಚು ಮತ್ತು ಆತನ ಗೆಳೆಯ ಅಶ್ವಿತ್ ಆರೋಪಿಗಳು.</p><p>ಅ.22ರಂದು ದಾಮೋದರ್ ಎಂಬವರ ಅಂಗಡಿಗೆ ಹೋದ ಇಬ್ಬರೂ ಹಣ ನೀಡುವಂತೆ ಬೆದರಿಸಿದ್ದಾರೆ. ಹೆದರಿಕೆಯಿಂದ ದಾಮೋದರ್ ದೂರು ನೀಡಲು ಹಂಜರಿದಿದ್ದರು. ರಕ್ಷಣೆಯ ಭರವಸೆ ನೀಡಿದ ನಂತರ ದೂರು ದಾಖಲಿಸಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಪಟಾಕಿ ಅಂಗಡಿ ಮಾಲೀಕನನ್ನು ಬೆದರಿಸಿ ಸುಲಿಗೆ ಮಾಡಲು ಯತ್ನಿಸಿದ ಇಬ್ಬರ ವಿರುದ್ಧ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್ನ ಫಾಜಿಲ್ ಕೊಲೆ ಆರೋಪಿ, ರೌಡಿಶೀಟರ್ ಪ್ರಶಾಂತ್ ಯಾನೆ ಪಚ್ಚು ಮತ್ತು ಆತನ ಗೆಳೆಯ ಅಶ್ವಿತ್ ಆರೋಪಿಗಳು.</p><p>ಅ.22ರಂದು ದಾಮೋದರ್ ಎಂಬವರ ಅಂಗಡಿಗೆ ಹೋದ ಇಬ್ಬರೂ ಹಣ ನೀಡುವಂತೆ ಬೆದರಿಸಿದ್ದಾರೆ. ಹೆದರಿಕೆಯಿಂದ ದಾಮೋದರ್ ದೂರು ನೀಡಲು ಹಂಜರಿದಿದ್ದರು. ರಕ್ಷಣೆಯ ಭರವಸೆ ನೀಡಿದ ನಂತರ ದೂರು ದಾಖಲಿಸಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>