ಬ್ರಹ್ಮ ಬಬ್ಬರ್ಯ ಬಂಟ ದೈವಸ್ಥಾನದಿಂದ ಹಾಲು, ಸೀಯಾಳ, ಫಲಪುಷ್ಪಗಳೊಂದಿಗೆ ಹೊರಟ ಯಾತ್ರೆಯು ಬೊಕ್ಕಪಟ್ಣ, ಬೋಳೂರು ಅಶ್ವತ್ಥಕಟ್ಟೆ, ನಾಗಬ್ರಹ್ಮ ಸ್ಥಾನ, ಬೋಳೂರು ಗ್ರಾಮ ಚಾವಡಿಯಿಂದಾಗಿ ಗುರುಪುರ ನದಿ ದಾಟಿ ತಣ್ಣೀರುಬಾವಿ ಸಮುದ್ರ ಕಿನಾರೆಯಲ್ಲಿ ಸೇರಿತು. ಭಜನೆಯೊಂದಿಗೆ ಗಂಗಾಮಾತೆಗೆ ಸಮರ್ಪಣೆ ಮಾಡಲಾಯಿತು. ಕದ್ರಿ ಸುವರ್ಣ ಕದಳಿ ಮಠದ ರಾಜಯೋಗಿ ನಿರ್ಮಲನಾಥಜಿ ಮಹಾರಾಜ್ ಅವರ ಮಾರ್ಗದರ್ಶನದಲ್ಲಿ ಸುಭಾಸ್ ಚಂದ್ರ ಕಾಂಚನ್ ಬೋಳಾರ ಅಧ್ಯಕ್ಷತೆಯಲ್ಲಿ ಪ್ರಾರ್ಥಿಸಲಾಯಿತು.