<p><strong>ಮಂಗಳೂರು: </strong>ಲಾಕ್ಡೌನ್ ಮತ್ತು ಉದ್ಯೋಗ ನಷ್ಟದಿಂದ ಸೌದಿ ಅರೇಬಿಯಾ ಹಾಗೂ ಮಸ್ಕತ್ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 291 ಜನರು ಎರಡು ವಿಮಾನಗಳಲ್ಲಿ ಮಂಗಳವಾರ ಮಂಗಳೂರಿಗೆ ಮರಳಿದ್ದಾರೆ.</p>.<p>ಸೌದಿ ಅರೇಬಿಯಾದ ಕೆಎಂಟಿ ಕಂಪನಿ ವ್ಯವಸ್ಥೆ ಮಾಡಿದ್ದ ಬಾಡಿಗೆ ವಿಮಾನದಲ್ಲಿ 180 ಜನರು ಬಂದಿದ್ದಾರೆ. ಬೆಳಿಗ್ಗೆ 6.30ಕ್ಕೆ ದಮ್ಮಾಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ವಿಮಾನ ಮಧ್ಯಾಹ್ನ 1.30ಕ್ಕೆ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.</p>.<p>ಕೇಂದ್ರ ಸರ್ಕಾರದ ವಂದೇ ಭಾರತ್ ಮಿಷನ್ನಡಿ ಮಸ್ಕತ್ನಿಂದ ಹೊರಟ ವಿಮಾನ ಬೆಂಗಳೂರು ಮಾರ್ಗವಾಗಿ ಮಂಗಳವಾರ ರಾತ್ರಿ 10.45ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನಕ್ಕೆ ಬಂದಿಳಿಯಿತು. ಈ ವಿಮಾನದಲ್ಲಿ ಕರಾವಳಿಯ 111 ಜನರು ತವರಿಗೆ ಹಿಂದಿರುಗಿದರು.</p>.<p>ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್ ನೇತೃತ್ವದ ಅಧಿಕಾರಿಗಳ ತಂಡ ಎಲ್ಲ ಪ್ರಯಾಣಿಕರ ದಾಖಲೆಗಳನ್ನು ಪರಿಶೀಲಿಸಿತು. ಬಳಿಕ ಎಲ್ಲ 291 ಜನರನ್ನೂ ಸಾಂಸ್ಥಿಕ ಕ್ವಾರಂಟೈನ್ಗೆ ಕಳುಹಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಲಾಕ್ಡೌನ್ ಮತ್ತು ಉದ್ಯೋಗ ನಷ್ಟದಿಂದ ಸೌದಿ ಅರೇಬಿಯಾ ಹಾಗೂ ಮಸ್ಕತ್ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 291 ಜನರು ಎರಡು ವಿಮಾನಗಳಲ್ಲಿ ಮಂಗಳವಾರ ಮಂಗಳೂರಿಗೆ ಮರಳಿದ್ದಾರೆ.</p>.<p>ಸೌದಿ ಅರೇಬಿಯಾದ ಕೆಎಂಟಿ ಕಂಪನಿ ವ್ಯವಸ್ಥೆ ಮಾಡಿದ್ದ ಬಾಡಿಗೆ ವಿಮಾನದಲ್ಲಿ 180 ಜನರು ಬಂದಿದ್ದಾರೆ. ಬೆಳಿಗ್ಗೆ 6.30ಕ್ಕೆ ದಮ್ಮಾಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ವಿಮಾನ ಮಧ್ಯಾಹ್ನ 1.30ಕ್ಕೆ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.</p>.<p>ಕೇಂದ್ರ ಸರ್ಕಾರದ ವಂದೇ ಭಾರತ್ ಮಿಷನ್ನಡಿ ಮಸ್ಕತ್ನಿಂದ ಹೊರಟ ವಿಮಾನ ಬೆಂಗಳೂರು ಮಾರ್ಗವಾಗಿ ಮಂಗಳವಾರ ರಾತ್ರಿ 10.45ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನಕ್ಕೆ ಬಂದಿಳಿಯಿತು. ಈ ವಿಮಾನದಲ್ಲಿ ಕರಾವಳಿಯ 111 ಜನರು ತವರಿಗೆ ಹಿಂದಿರುಗಿದರು.</p>.<p>ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್ ನೇತೃತ್ವದ ಅಧಿಕಾರಿಗಳ ತಂಡ ಎಲ್ಲ ಪ್ರಯಾಣಿಕರ ದಾಖಲೆಗಳನ್ನು ಪರಿಶೀಲಿಸಿತು. ಬಳಿಕ ಎಲ್ಲ 291 ಜನರನ್ನೂ ಸಾಂಸ್ಥಿಕ ಕ್ವಾರಂಟೈನ್ಗೆ ಕಳುಹಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>