<p><strong>ಮಂಗಳೂರು</strong>: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಡಿಸೆಂಬರ್ 19ರಂದು ನಗರದಲ್ಲಿ ನಡೆದ ಪೊಲೀಸ್ ಗೋಲಿಬಾರ್ನಲ್ಲಿ ಇಬ್ಬರು ಮೃತಪಟ್ಟಿರುವುದಕ್ಕೆ ಸಂಬಂಧಿಸಿದಂತೆ ಆಗಸ್ಟ್ 11ರಂದು ಅಂತಿಮ ಹಂತದ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಯಲಿದೆ.</p>.<p>ಡಿ.19ರಂದು ನಡೆದ ಗೋಲಿಬಾರ್ನಲ್ಲಿ ಅಬ್ದುಲ್ ಜಲೀಲ್ ಮತ್ತು ನೌಶೀನ್ ಎಂಬುವವರು ಗುಂಡೇಟಿನಿಂದ ಮೃತಪಟ್ಟಿದ್ದರು. ಈ ಸಂಬಂಧ ಸಾಕ್ಷ್ಯ ಸಲ್ಲಿಸಲು ಅಥವಾ ಹೇಳಿಕೆ ದಾಖಲಿಸಲು ಆ.11ರಂದು ಅಂತಿಮ ಹಂತದ ಅವಕಾಶವಿದೆ ಎಂದು ಮ್ಯಾಜಿಸ್ಟೀರಿಯಲ್ ವಿಚಾರಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಗೋಲಿಬಾರ್ ಘಟನೆಯ ಕುರಿತು ಮಾಹಿತಿ ಹೊಂದಿದ್ದವರು ಅಥವಾ ಘಟನೆಯನ್ನು ನೇರವಾಗಿ ನೋಡಿರುವವರು ಆ.11ರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1ರ ಅವಧಿಯಲ್ಲಿ ಹಂಪನಕಟ್ಟೆಯ ಮಿನಿ ವಿಧಾನಸೌಧದಲ್ಲಿರುವ ಮಂಗಳೂರು ಉಪ ವಿಭಾಗಾಧಿಕಾರಿ ಕಚೇರಿಗೆ ಹಾಜರಾಗಿ ಸಾಕ್ಷ್ಯ ಸಲ್ಲಿಸಬಹುದು ಅಥವಾ ಹೇಳಿಕೆ ದಾಖಲಿಸಬಹುದು. ಆ ನಂತರ ಸಾರ್ವಜನಿಕರಿಂದ ಯಾವುದೇ ರೀತಿಯ ಹೇಳಿಕೆ ಮತ್ತು ಸಾಕ್ಷ್ಯ ಸಂಗ್ರಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಡಿಸೆಂಬರ್ 19ರಂದು ನಗರದಲ್ಲಿ ನಡೆದ ಪೊಲೀಸ್ ಗೋಲಿಬಾರ್ನಲ್ಲಿ ಇಬ್ಬರು ಮೃತಪಟ್ಟಿರುವುದಕ್ಕೆ ಸಂಬಂಧಿಸಿದಂತೆ ಆಗಸ್ಟ್ 11ರಂದು ಅಂತಿಮ ಹಂತದ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಯಲಿದೆ.</p>.<p>ಡಿ.19ರಂದು ನಡೆದ ಗೋಲಿಬಾರ್ನಲ್ಲಿ ಅಬ್ದುಲ್ ಜಲೀಲ್ ಮತ್ತು ನೌಶೀನ್ ಎಂಬುವವರು ಗುಂಡೇಟಿನಿಂದ ಮೃತಪಟ್ಟಿದ್ದರು. ಈ ಸಂಬಂಧ ಸಾಕ್ಷ್ಯ ಸಲ್ಲಿಸಲು ಅಥವಾ ಹೇಳಿಕೆ ದಾಖಲಿಸಲು ಆ.11ರಂದು ಅಂತಿಮ ಹಂತದ ಅವಕಾಶವಿದೆ ಎಂದು ಮ್ಯಾಜಿಸ್ಟೀರಿಯಲ್ ವಿಚಾರಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಗೋಲಿಬಾರ್ ಘಟನೆಯ ಕುರಿತು ಮಾಹಿತಿ ಹೊಂದಿದ್ದವರು ಅಥವಾ ಘಟನೆಯನ್ನು ನೇರವಾಗಿ ನೋಡಿರುವವರು ಆ.11ರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1ರ ಅವಧಿಯಲ್ಲಿ ಹಂಪನಕಟ್ಟೆಯ ಮಿನಿ ವಿಧಾನಸೌಧದಲ್ಲಿರುವ ಮಂಗಳೂರು ಉಪ ವಿಭಾಗಾಧಿಕಾರಿ ಕಚೇರಿಗೆ ಹಾಜರಾಗಿ ಸಾಕ್ಷ್ಯ ಸಲ್ಲಿಸಬಹುದು ಅಥವಾ ಹೇಳಿಕೆ ದಾಖಲಿಸಬಹುದು. ಆ ನಂತರ ಸಾರ್ವಜನಿಕರಿಂದ ಯಾವುದೇ ರೀತಿಯ ಹೇಳಿಕೆ ಮತ್ತು ಸಾಕ್ಷ್ಯ ಸಂಗ್ರಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>