<p><strong>ಮಂಗಳೂರು</strong>: ಕೆಂಜಾರು ಜೋಕಟ್ಟೆಯಲ್ಲಿ ಕೆಲ ತಿಂಗಳ ಹಿಂದೆ ನಡೆದಿದ್ದ ಕಳವು ಪ್ರಕರಣದ ಆರೋಪಿಗಳಿಬ್ಬರನ್ನು ಬಜಪೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಸಂಬಂಧಿಕರ ಮೆಹಂದಿ ಕಾರ್ಯಕ್ರಮಕ್ಕೆ 2025ರ ಸೆ 23ರಂದು ಕಳವಾರಿಗೆ ಹೋಗಿದ್ದಾಗ ಮನೆಯಲ್ಲಿದ್ದ ಸುಮಾರು ₹ 23 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ₹ 1.25 ಲಕ್ಷ ನಗದು ಹಣ ಕಳವಾದ ಬಗ್ಗೆ ಕೆಂಜಾರು ಜೋಕಟ್ಟೆಯಲ್ಲಿ ಮೊಹಮ್ಮದ್ ಷರೀಫ್ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು.</p>.<p>ಬಾಳ ಗ್ರಾಮದ ಕಳವಾರಿನ ಅಬ್ದುಲ್ ನಾಸರ್ ಅಲಿಯಾಸ್ ನಾಸಿರ್ ಅಲಿಯಾಸ್ ನಾಚಿ (31) ಈ ಕಳವು ಕೃತ್ಯದಲ್ಲಿ ಭಾಗಿಯಾಗಿ ನಂತರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು ತನಿಖೆ ವೇಳೆ ಗೊತ್ತಾಗಿತ್ತು. ಆತನ ಬಂಧನಕ್ಕೆ ಪೊಲೀಸರು ಲುಕ್ ಔಟ್ ಸುತ್ತೋಲೆಯನ್ನು ಹೊರಡಿಸಿದ್ದರು.</p>.<p>‘ಆರೋಪಿ ಅಬ್ದುಲ್ ನಾಸೀರ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಪ್ರಕರಣದ ದೂರುದಾರರಾದ ಮೊಹಮ್ಮದ್ ಷರೀಫ್ ಅವರ ಸಂಬಂಧಿ ಕಳವಾರು ನಿವಾಸಿ ಮಯ್ಯದ್ದಿ ಇಮ್ರಾನ್ ಮತ್ತು ನಾನು ಸೇರಿ ಈ ಕಳ್ಳತನ ಮಾಡಿದ್ದೆವು’ ಎಂದು ಆತ ಒಪ್ಪಿಕೊಂಡಿದ್ದ. ಆರೋಪಿಗಳಿಂದ ₹ 27 ಲಕ್ಷ ಮೌಲ್ಯದ 222 ಗ್ರಾಂ ತೂಕದ ಚಿನ್ನಾಭರಣಗಳನ್ನು, ₹ 20 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಅಂದಾಜು ₹ 50 ಸಾವಿರ ಮೌಲ್ಯದ ಸ್ಕೂಟರ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. </p>
<p><strong>ಮಂಗಳೂರು</strong>: ಕೆಂಜಾರು ಜೋಕಟ್ಟೆಯಲ್ಲಿ ಕೆಲ ತಿಂಗಳ ಹಿಂದೆ ನಡೆದಿದ್ದ ಕಳವು ಪ್ರಕರಣದ ಆರೋಪಿಗಳಿಬ್ಬರನ್ನು ಬಜಪೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಸಂಬಂಧಿಕರ ಮೆಹಂದಿ ಕಾರ್ಯಕ್ರಮಕ್ಕೆ 2025ರ ಸೆ 23ರಂದು ಕಳವಾರಿಗೆ ಹೋಗಿದ್ದಾಗ ಮನೆಯಲ್ಲಿದ್ದ ಸುಮಾರು ₹ 23 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ₹ 1.25 ಲಕ್ಷ ನಗದು ಹಣ ಕಳವಾದ ಬಗ್ಗೆ ಕೆಂಜಾರು ಜೋಕಟ್ಟೆಯಲ್ಲಿ ಮೊಹಮ್ಮದ್ ಷರೀಫ್ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು.</p>.<p>ಬಾಳ ಗ್ರಾಮದ ಕಳವಾರಿನ ಅಬ್ದುಲ್ ನಾಸರ್ ಅಲಿಯಾಸ್ ನಾಸಿರ್ ಅಲಿಯಾಸ್ ನಾಚಿ (31) ಈ ಕಳವು ಕೃತ್ಯದಲ್ಲಿ ಭಾಗಿಯಾಗಿ ನಂತರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು ತನಿಖೆ ವೇಳೆ ಗೊತ್ತಾಗಿತ್ತು. ಆತನ ಬಂಧನಕ್ಕೆ ಪೊಲೀಸರು ಲುಕ್ ಔಟ್ ಸುತ್ತೋಲೆಯನ್ನು ಹೊರಡಿಸಿದ್ದರು.</p>.<p>‘ಆರೋಪಿ ಅಬ್ದುಲ್ ನಾಸೀರ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಪ್ರಕರಣದ ದೂರುದಾರರಾದ ಮೊಹಮ್ಮದ್ ಷರೀಫ್ ಅವರ ಸಂಬಂಧಿ ಕಳವಾರು ನಿವಾಸಿ ಮಯ್ಯದ್ದಿ ಇಮ್ರಾನ್ ಮತ್ತು ನಾನು ಸೇರಿ ಈ ಕಳ್ಳತನ ಮಾಡಿದ್ದೆವು’ ಎಂದು ಆತ ಒಪ್ಪಿಕೊಂಡಿದ್ದ. ಆರೋಪಿಗಳಿಂದ ₹ 27 ಲಕ್ಷ ಮೌಲ್ಯದ 222 ಗ್ರಾಂ ತೂಕದ ಚಿನ್ನಾಭರಣಗಳನ್ನು, ₹ 20 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಅಂದಾಜು ₹ 50 ಸಾವಿರ ಮೌಲ್ಯದ ಸ್ಕೂಟರ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. </p>