<p><strong>ಮಂಗಳೂರು:</strong> ಮಹಾವೀರ ವೃತ್ತದಲ್ಲಿ (ಪಂಪ್ವೆಲ್) ಮೇಲ್ಸೇತುವೆ ಕಾಮಗಾರಿ ಸಲುವಾಗಿ ತೆರವುಗೊಳಿಸಿದ್ದ ಭಾರಿ ಗಾತ್ರದ ‘ಕಲಶ’ದ ಆಕೃತಿಯನ್ನು ಮರುಸ್ಥಾಪಿಸಲಾಗುತ್ತಿದೆ. ಅದನ್ನು ಸೋಮವಾರ ರಾತ್ರಿ ಪೀಠದ ಮೇಲೆ ತಂದಿರಿಸಲಾಯಿತು. </p>.<p>ಪಂಪ್ವೆಲ್ನಲ್ಲಿ ವಿಸ್ತಾರವಾದ ವೃತ್ತವನ್ನು ನಿರ್ಮಿಸಿ, ಅದಕ್ಕೆ ಮಹಾವೀರ ವೃತ್ತ ಎಂದು 2003ರಲ್ಲಿ ನಾಮಕರಣ ಮಾಡಲಾಗಿತ್ತು. ಆ ವೃತ್ತದ ಕೇಂದ್ರದಲ್ಲಿ ಕಲಶದ ಆಕೃತಿಯನ್ನು ಸ್ಥಾಪಿಸಲಾಗಿತ್ತು. ಮಂಗಳೂರು ಜೈನ್ ಸೊಸೈಟಿ ಹಾಗೂ ಜೈನ ಸಮುದಾಯದವರು ಅದರ ಉಸ್ತುವಾರಿ ವಹಿಸಿದ್ದರು. ರಾಷ್ಟ್ರೀಯ ಹೆದ್ದಾರಿ 66ರ ಮೇಲ್ಸೇತುವೆಯು ಈ ವೃತ್ತದ ಮೇಲೆಯೇ ಹಾದು ಹೋಗಿದ್ದು, ಅದರ ಕಾಮಗಾರಿ ಸಲುವಾಗಿ 2016ರ ಮಾರ್ಚ್ನಲ್ಲಿ ಕಲಶದ ಆಕೃತಿಯನ್ನು ತೆರವುಗೊಳಿಸಲಾಗಿತ್ತು. ಈಗ ಮೇಲ್ಸೇತುವೆ ಪಕ್ಕದಲ್ಲಿ ವೃತ್ತಾಕಾರದ ಪೀಠವನ್ನು ರಚಿಸಿ, ಅದರ ಮೇಳೆ ಕಲಶದ ಆಕೃತಿಯನ್ನು ಮರುಸ್ಥಾಪಿಸಲಾಗುತ್ತಿದೆ.</p>.<p>‘ಈ ಕಲಶದ ಆಕೃತಿಯನ್ನು ಮರುಸ್ಥಾಪಿಸಿ ಮಹಾವೀರ ವೃತ್ತದ ಸೌಂದರ್ಯ ಹೆಚ್ಚಿಸುವ ಕಾಮಗಾರಿಯನ್ನು ಸುಮಾರು ₹ 15 ಲಕ್ಷ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಅದರ ಪೀಠವನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿದೆ. ಕಲಶದ ಆಕೃತಿಯನ್ನು ಮರುಸ್ಥಾಪಿಸಿ ವೃತ್ತವನ್ನು ನವೀಕರಿಸುವ ಕಾರ್ಯವನ್ನು ಮಂಗಳೂರು ಜೈನ್ ಸೊಸೈಟಿ ಹಾಗೂ ಜೈನ ಸಮುದಾಯದವರು ಸೇರಿ ನಿರ್ವಹಿಸುತ್ತಿದ್ದಾರೆ. ಒಂದೂವರೆ ತಿಂಗಳಲ್ಲಿ ಈ ನವೀಕರಣ ಕಾರ್ಯ ಪೂರ್ಣಗೊಳ್ಳಲಿದೆ’ ಎಂದು ಸೊಸೈಟಿಯ ಅಧ್ಯಕ್ಷ ಪುಷ್ಪರಾಜ ಜೈನ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಮಹಾವೀರ ವೃತ್ತದಲ್ಲಿ (ಪಂಪ್ವೆಲ್) ಮೇಲ್ಸೇತುವೆ ಕಾಮಗಾರಿ ಸಲುವಾಗಿ ತೆರವುಗೊಳಿಸಿದ್ದ ಭಾರಿ ಗಾತ್ರದ ‘ಕಲಶ’ದ ಆಕೃತಿಯನ್ನು ಮರುಸ್ಥಾಪಿಸಲಾಗುತ್ತಿದೆ. ಅದನ್ನು ಸೋಮವಾರ ರಾತ್ರಿ ಪೀಠದ ಮೇಲೆ ತಂದಿರಿಸಲಾಯಿತು. </p>.<p>ಪಂಪ್ವೆಲ್ನಲ್ಲಿ ವಿಸ್ತಾರವಾದ ವೃತ್ತವನ್ನು ನಿರ್ಮಿಸಿ, ಅದಕ್ಕೆ ಮಹಾವೀರ ವೃತ್ತ ಎಂದು 2003ರಲ್ಲಿ ನಾಮಕರಣ ಮಾಡಲಾಗಿತ್ತು. ಆ ವೃತ್ತದ ಕೇಂದ್ರದಲ್ಲಿ ಕಲಶದ ಆಕೃತಿಯನ್ನು ಸ್ಥಾಪಿಸಲಾಗಿತ್ತು. ಮಂಗಳೂರು ಜೈನ್ ಸೊಸೈಟಿ ಹಾಗೂ ಜೈನ ಸಮುದಾಯದವರು ಅದರ ಉಸ್ತುವಾರಿ ವಹಿಸಿದ್ದರು. ರಾಷ್ಟ್ರೀಯ ಹೆದ್ದಾರಿ 66ರ ಮೇಲ್ಸೇತುವೆಯು ಈ ವೃತ್ತದ ಮೇಲೆಯೇ ಹಾದು ಹೋಗಿದ್ದು, ಅದರ ಕಾಮಗಾರಿ ಸಲುವಾಗಿ 2016ರ ಮಾರ್ಚ್ನಲ್ಲಿ ಕಲಶದ ಆಕೃತಿಯನ್ನು ತೆರವುಗೊಳಿಸಲಾಗಿತ್ತು. ಈಗ ಮೇಲ್ಸೇತುವೆ ಪಕ್ಕದಲ್ಲಿ ವೃತ್ತಾಕಾರದ ಪೀಠವನ್ನು ರಚಿಸಿ, ಅದರ ಮೇಳೆ ಕಲಶದ ಆಕೃತಿಯನ್ನು ಮರುಸ್ಥಾಪಿಸಲಾಗುತ್ತಿದೆ.</p>.<p>‘ಈ ಕಲಶದ ಆಕೃತಿಯನ್ನು ಮರುಸ್ಥಾಪಿಸಿ ಮಹಾವೀರ ವೃತ್ತದ ಸೌಂದರ್ಯ ಹೆಚ್ಚಿಸುವ ಕಾಮಗಾರಿಯನ್ನು ಸುಮಾರು ₹ 15 ಲಕ್ಷ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಅದರ ಪೀಠವನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿದೆ. ಕಲಶದ ಆಕೃತಿಯನ್ನು ಮರುಸ್ಥಾಪಿಸಿ ವೃತ್ತವನ್ನು ನವೀಕರಿಸುವ ಕಾರ್ಯವನ್ನು ಮಂಗಳೂರು ಜೈನ್ ಸೊಸೈಟಿ ಹಾಗೂ ಜೈನ ಸಮುದಾಯದವರು ಸೇರಿ ನಿರ್ವಹಿಸುತ್ತಿದ್ದಾರೆ. ಒಂದೂವರೆ ತಿಂಗಳಲ್ಲಿ ಈ ನವೀಕರಣ ಕಾರ್ಯ ಪೂರ್ಣಗೊಳ್ಳಲಿದೆ’ ಎಂದು ಸೊಸೈಟಿಯ ಅಧ್ಯಕ್ಷ ಪುಷ್ಪರಾಜ ಜೈನ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>