<p><strong>ಮಂಗಳೂರು:</strong> ಬಜಪೆ ಪೊಲೀಸ್ ಠಾಣೆಯ ವ್ಯಾಪ್ತಿಯ ಎಡಪದವಿನಲ್ಲಿ ಸೋಮವಾರ ಬೈಕಿನಲ್ಲಿ ಸಾಗುತ್ತಿದ್ದ ನಾಲ್ವರು ಯುವಕರ ಗುಂಪು ಚೂರಿ ಇರಿದು ಯುವಕನನ್ನು ಕೊಲ್ಲಲು ಯತ್ನಿಸಿದೆ. ಈ ಕೃತ್ಯದಲ್ಲಿ ಭಾಗಿಯಾದ ಒಬ್ಬ ಆರೋಪಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.</p><p>ಅಖಿಲೇಶ್ ಹಲ್ಲೆಗೊಳಗಾದ ಯುವಕ. ಒಂದೇ ಬೈಕಿನಲ್ಲಿ ನಾಲ್ವರು ಕುಳಿತುಕೊಂಡು, ಕೈಯಲ್ಲಿ ಚೂರಿ ಹಿಡಿದುಕೊಂಡು ಸಾಗುತ್ತಿದ್ದುದ್ದನ್ನು ಅಖಿಲೇಶ್ ನೋಡಿದ್ದರು. ಈ ಕುರಿತು ವಿಡಿಯೊ ಚಿತ್ರೀಕರಿಸಲು ಅವರನ್ನು ಹಿಂಬಾಲಿಸಿದ್ದರು. ಬೈಕಿನಲ್ಲಿ ಸಾಗುತ್ತಿದ್ದ ಕಿಡಿಗೇಡಿಗಳು ಅಖಿಲೇಶ್ ಅವರತ್ತ ಚೂರಿ ಬೀಸಿದ್ದು, ಅವರ ಕೈಗಳಿಗೆ ಗಾಯಗಳಾಗಿವೆ. ಆ ನಾಲ್ವರು ಆರೋಪಿಗಳಲ್ಲಿ ಒಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನುಳಿದ ಮೂವರು ಪರಾರಿಯಾಗಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.</p><p>‘ನಾಲ್ವರು ಆರೋಪಿಗಳ ಗುರುತು ಪತ್ತೆಯಾಗಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಈ ನಾಲ್ವರು ವ್ಯಕ್ತಿಗಳು, ಈ ಘಟನೆಗೂ ಮುನ್ನ ಬಾರ್ ಒಂದರಿಂದ ಹೊರಗೆ ಬರುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಅವರು ಪಾನಮತ್ತರಾಗಿದ್ದರೆ ಅಥವಾ ಬೇರಾವುದೇ ಅಮಲು ಪದಾರ್ಥ ಸೇವಿಸಿ, ಅದರ ಪ್ರಭಾವಕ್ಕೆ ಒಳಗಾಗಿದ್ದರೇ ಎಂಬ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ. ಈ ಕೃತ್ಯದ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳೇ ತನಿಖೆ ನಡೆಸುತ್ತಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಬಜಪೆ ಪೊಲೀಸ್ ಠಾಣೆಯ ವ್ಯಾಪ್ತಿಯ ಎಡಪದವಿನಲ್ಲಿ ಸೋಮವಾರ ಬೈಕಿನಲ್ಲಿ ಸಾಗುತ್ತಿದ್ದ ನಾಲ್ವರು ಯುವಕರ ಗುಂಪು ಚೂರಿ ಇರಿದು ಯುವಕನನ್ನು ಕೊಲ್ಲಲು ಯತ್ನಿಸಿದೆ. ಈ ಕೃತ್ಯದಲ್ಲಿ ಭಾಗಿಯಾದ ಒಬ್ಬ ಆರೋಪಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.</p><p>ಅಖಿಲೇಶ್ ಹಲ್ಲೆಗೊಳಗಾದ ಯುವಕ. ಒಂದೇ ಬೈಕಿನಲ್ಲಿ ನಾಲ್ವರು ಕುಳಿತುಕೊಂಡು, ಕೈಯಲ್ಲಿ ಚೂರಿ ಹಿಡಿದುಕೊಂಡು ಸಾಗುತ್ತಿದ್ದುದ್ದನ್ನು ಅಖಿಲೇಶ್ ನೋಡಿದ್ದರು. ಈ ಕುರಿತು ವಿಡಿಯೊ ಚಿತ್ರೀಕರಿಸಲು ಅವರನ್ನು ಹಿಂಬಾಲಿಸಿದ್ದರು. ಬೈಕಿನಲ್ಲಿ ಸಾಗುತ್ತಿದ್ದ ಕಿಡಿಗೇಡಿಗಳು ಅಖಿಲೇಶ್ ಅವರತ್ತ ಚೂರಿ ಬೀಸಿದ್ದು, ಅವರ ಕೈಗಳಿಗೆ ಗಾಯಗಳಾಗಿವೆ. ಆ ನಾಲ್ವರು ಆರೋಪಿಗಳಲ್ಲಿ ಒಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನುಳಿದ ಮೂವರು ಪರಾರಿಯಾಗಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.</p><p>‘ನಾಲ್ವರು ಆರೋಪಿಗಳ ಗುರುತು ಪತ್ತೆಯಾಗಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಈ ನಾಲ್ವರು ವ್ಯಕ್ತಿಗಳು, ಈ ಘಟನೆಗೂ ಮುನ್ನ ಬಾರ್ ಒಂದರಿಂದ ಹೊರಗೆ ಬರುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಅವರು ಪಾನಮತ್ತರಾಗಿದ್ದರೆ ಅಥವಾ ಬೇರಾವುದೇ ಅಮಲು ಪದಾರ್ಥ ಸೇವಿಸಿ, ಅದರ ಪ್ರಭಾವಕ್ಕೆ ಒಳಗಾಗಿದ್ದರೇ ಎಂಬ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ. ಈ ಕೃತ್ಯದ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳೇ ತನಿಖೆ ನಡೆಸುತ್ತಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>