ಈ ಬಗ್ಗೆ ಮಾಹಿತಿ ನೀಡಿರುವ ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್., ‘ಸ್ವಾಮಿ ಕೊರಗಜ್ಜ ದೈವಸ್ಥಾನಗಳನ್ನು ಅಪವಿತ್ರಗೊಳಿಸಿದ ಬಗ್ಗೆಕಳೆದ ಮೂರು ತಿಂಗಳಲ್ಲಿ ನಗರದ ಪಾಂಡೇಶ್ವರ, ಉಳ್ಳಾಲ ಮತ್ತು ಕದ್ರಿ ಪೊಲೀಸ್ ಠಾಣೆಗಳಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು. ರಹೀಂ ಹಾಗೂ ತೌಫಿಕ್ ಕೆಲ ದಿನಗಳ ಹಿಂದೆ ಎಮ್ಮೆಕೆರೆ ದೈವಸ್ಥಾನದ ಪೂಜಾರಿ (ಅರ್ಚಕ) ಅವರನ್ನು ಸಂಪರ್ಕಿಸಿದ್ದು, ಬುಧವಾರ ತಪ್ಪೊಪ್ಪಿಗೆ ನೀಡಿದ್ದಾರೆ. ಬಳಿಕ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ’ ಎಂದರು.