<p><strong>ಮಂಗಳೂರು:</strong> ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಸಂಬಂಧಿಸಿದ 2.71 ಎಕರೆ ಜಾಗವನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.</p>.<p>ಈ ಸ್ಥಳದಲ್ಲಿ ಪ್ಯಾರಾಮೆಡಿಕಲ್ ಕಾಲೇಜು, ನರ್ಸಿಂಗ್ ಕಾಲೇಜು, ಅಧಿಕಾರಿ– ಸಿಬ್ಬಂದಿಗೆ ವಸತಿ ಗೃಹ ನಿರ್ಮಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಈ ಸ್ಥಳವು ನಗರದ ಹೃದಯ ಭಾಗದಲ್ಲಿರುವುದರಿಂದ ಈ ಸ್ಥಳದಲ್ಲಿ ಹೃದಯರೋಗ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಶಾಖೆ ತೆರೆಲು ಪ್ರಯತ್ನ ನಡೆಯುತ್ತಿವೆ. ಈ ಬಗ್ಗೆ ಆರೋಗ್ಯ ಸಚಿವರ ಗಮನಕ್ಕೆ ತರಲಾಗಿದೆ ಎಂದು ಐವನ್ ಡಿಸೋಜ ತಿಳಿಸಿದರು.</p>.<p>ಒಪಿಡಿ ವಿಭಾಗಕ್ಕೆ ₹ 20ಕೋಟಿಯನ್ನು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಅದೇ ರೀತಿ 7 ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿ ಪಡಿಸಲು ಬಜೆಟ್ನಲ್ಲಿ ಇರಿಸಲಾದ ₹ 800ಕೋಟಿಯಲ್ಲಿ ₹ 100 ಕೋಟಿ ರೂಪಾಯಿಯನ್ನು ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೂ ಇರಿಸಲು ಅವಕಾಶಗಳಿವೆ. ಈ ಹಣವನ್ನು ಬಳಕೆ ಮಾಡಿ ಇಲ್ಲಿ ಪ್ಯಾರಾಮೆಡಿಕಲ್ ಕಾಲೇಜು, ನರ್ಸಿಂಗ್ ಕಾಲೇಜು ಮತ್ತು ಅಧಿಕಾರಿಗಳ ವಸತಿ ಗೃಹ ನಿರ್ಮಿಸುವ ಯೋಜನೆಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದರು.</p>.<p>ಆ.1ರಂದು ಆರೋಗ್ಯ ರಕ್ಷಾ ಸಮಿತಿ ಸಭೆ ಮಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯಲಿದೆ. ಮುಂದಿನ ಯೋಜನೆಯ ಬಗ್ಗೆ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ, ಈ ಯೋಜನೆಯನ್ನು ಅಂತಿಮಗೊಳಿಸಲು ಅರೋಗ್ಯ ಸಚಿವರನ್ನು ಕೇಳಿಕೊಳ್ಳಲು ವಿನಂತಿಸಲಾಗಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಪ್ರಸಾದ್, ವೈದ್ಯಾಧಿಕಾರಿ ಡಾ.ಸುಧಾಕರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ, ಪ್ರಮುಖರಾದ ಪದ್ಮನಾಭ ಅಮೀನ್, ಅನಿಲ್ ರಸ್ಕಿನ್ಹಾ, ಪ್ರಮೀಳಾ ಈಶ್ವರ್, ಮನೀಶ್, ಶಶಿಧರ್ ಬಜಾಲ್, ದಾಮೋದರ್ ಪುತ್ತೂರು ಜತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಸಂಬಂಧಿಸಿದ 2.71 ಎಕರೆ ಜಾಗವನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.</p>.<p>ಈ ಸ್ಥಳದಲ್ಲಿ ಪ್ಯಾರಾಮೆಡಿಕಲ್ ಕಾಲೇಜು, ನರ್ಸಿಂಗ್ ಕಾಲೇಜು, ಅಧಿಕಾರಿ– ಸಿಬ್ಬಂದಿಗೆ ವಸತಿ ಗೃಹ ನಿರ್ಮಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಈ ಸ್ಥಳವು ನಗರದ ಹೃದಯ ಭಾಗದಲ್ಲಿರುವುದರಿಂದ ಈ ಸ್ಥಳದಲ್ಲಿ ಹೃದಯರೋಗ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಶಾಖೆ ತೆರೆಲು ಪ್ರಯತ್ನ ನಡೆಯುತ್ತಿವೆ. ಈ ಬಗ್ಗೆ ಆರೋಗ್ಯ ಸಚಿವರ ಗಮನಕ್ಕೆ ತರಲಾಗಿದೆ ಎಂದು ಐವನ್ ಡಿಸೋಜ ತಿಳಿಸಿದರು.</p>.<p>ಒಪಿಡಿ ವಿಭಾಗಕ್ಕೆ ₹ 20ಕೋಟಿಯನ್ನು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಅದೇ ರೀತಿ 7 ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿ ಪಡಿಸಲು ಬಜೆಟ್ನಲ್ಲಿ ಇರಿಸಲಾದ ₹ 800ಕೋಟಿಯಲ್ಲಿ ₹ 100 ಕೋಟಿ ರೂಪಾಯಿಯನ್ನು ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೂ ಇರಿಸಲು ಅವಕಾಶಗಳಿವೆ. ಈ ಹಣವನ್ನು ಬಳಕೆ ಮಾಡಿ ಇಲ್ಲಿ ಪ್ಯಾರಾಮೆಡಿಕಲ್ ಕಾಲೇಜು, ನರ್ಸಿಂಗ್ ಕಾಲೇಜು ಮತ್ತು ಅಧಿಕಾರಿಗಳ ವಸತಿ ಗೃಹ ನಿರ್ಮಿಸುವ ಯೋಜನೆಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದರು.</p>.<p>ಆ.1ರಂದು ಆರೋಗ್ಯ ರಕ್ಷಾ ಸಮಿತಿ ಸಭೆ ಮಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯಲಿದೆ. ಮುಂದಿನ ಯೋಜನೆಯ ಬಗ್ಗೆ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ, ಈ ಯೋಜನೆಯನ್ನು ಅಂತಿಮಗೊಳಿಸಲು ಅರೋಗ್ಯ ಸಚಿವರನ್ನು ಕೇಳಿಕೊಳ್ಳಲು ವಿನಂತಿಸಲಾಗಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಪ್ರಸಾದ್, ವೈದ್ಯಾಧಿಕಾರಿ ಡಾ.ಸುಧಾಕರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ, ಪ್ರಮುಖರಾದ ಪದ್ಮನಾಭ ಅಮೀನ್, ಅನಿಲ್ ರಸ್ಕಿನ್ಹಾ, ಪ್ರಮೀಳಾ ಈಶ್ವರ್, ಮನೀಶ್, ಶಶಿಧರ್ ಬಜಾಲ್, ದಾಮೋದರ್ ಪುತ್ತೂರು ಜತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>