ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ವರ್ಗಕ್ಕೆ ಅನುಭವದ ಕೊರತೆ ಇದೆಯೋ? ಅಥವಾ ಜನರ ತೆರಿಗೆ ಹಣ ಇದೆ ಎಂದು ಯಥೇಚ್ಛವಾಗಿ ದುಂದುವೆಚ್ಚ ಮಾಡಲಾಗುತ್ತಿದೆಯೋ? ಎಂದು ತಿಳಿಯುತ್ತಿಲ್ಲ. ಬೇಕಾಬಿಟ್ಟಿ ರಸ್ತೆಗಳನ್ನು ಅಗೆದು ಜನಸಾಮಾನ್ಯರಿಗೆ ತೊಂದರೆ ಕೊಡಲಾಗುತ್ತಿದೆ. ಸೋಮವಾರ ನಗರವಿಡೀ ಬ್ಲಾಕ್ ಆಗಿದ್ದು, ಜನರು ತೀವ್ರ ತೊಂದರೆ ಅನುಭವಿಸಿದ್ದರು. ಕಾಮಗಾರಿ ಇದೀಗ ಆರಂಭಗೊಂಡಿದ್ದು, ಜನರು ಇನ್ನಷ್ಟು ಸಮಸ್ಯೆ ಎದುರಿಸುವ ಸಾಧ್ಯತೆ ಇದೆ. ಹಾಗಾಗಿ ಜಿಲ್ಲಾಧಿಕಾರಿ ತಕ್ಷಣ ಮಧ್ಯಪ್ರವೇಶಿಸಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಅವರು ಆಗ್ರಹಿಸಿದರು.