<p><strong>ಮಂಗಳೂರು</strong>: ಮಹಾನಗರ ಪಾಲಿಕೆಯ ಅಭಿವೃದ್ಧಿಯಲ್ಲಿ ಪೌರಕಾರ್ಮಿಕರ ಕೊಡುಗೆ ಗಮನಾರ್ಹವಾದುದು ಎಂದು ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಹೇಳಿದರು. </p>.<p>ಮಹಾನಗರ ಪಾಲಿಕೆ ವತಿಯಿಂದ ಮಂಗಳವಾರ ಇಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಪೌರ ಕಾರ್ಮಿಕರಿಂದಾಗಿ ಮಹಾನಗರ ಪಾಲಿಕೆಗೆ ಗೌರವ ದೊರಕಿದೆ. ಪೌರಕಾರ್ಮಿಕರು ದೈನಂದಿನ ಜಂಟಾಟಗಳಿಂದ ದೂರ ಇದ್ದು, ಸಂಭ್ರಮಿಸಲು ಪೌರ ಕಾರ್ಮಿಕರ ದಿನ ಆಚರಿಸಲಾಗುತ್ತದೆ ಎಂದರು.</p>.<p>ಪಾಲಿಕೆ ಸಮುದಾಯ ಸಂಘಟನಾಧಿಕಾರಿ ಮಾಲಿನಿ ರೋಡ್ರಿಗಸ್ ಮಾತನಾಡಿ, ನಗರ ಸ್ವಚ್ಛತೆಯ ಜೊತೆಗೆ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಪೌರ ಕಾರ್ಮಿಕರಿಗೆ ಪಾಲಿಕೆ ವಿಮೆ ಮಾಡಿಸಿದ್ದು, ಈ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವುದಕ್ಕಿಂತ ಮೊದಲು ಮಾಹಿತಿ ನೀಡಬೇಕು. ಈ ವರ್ಷ ಆರೋಗ್ಯ ನಿಧಿಯನ್ನು ₹5 ಲಕ್ಷಕ್ಕೆ ಏರಿಸಲಾಗಿದೆ ಎಂದರು.</p>.<p>ಪಾಲಿಕೆ ಆರೋಗ್ಯಾಧಿಕಾರಿ ಡಾ. ಮಂಜಯ್ಯ ಶೆಟ್ಟಿ, ವಲಯ ಆಯುಕ್ತೆ ವಾಣಿ ಆಳ್ವ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ದೀಪ್ತಿ ಎನ್., ದಕ್ಷಿಣ ಕನ್ನಡ ಜಿಲ್ಲಾ ಪೌರ ಕಾರ್ಮಿಕ ಸಂಘದ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಎಸ್.ಪಿ.ಆನಂದ್ ಉಪಸ್ಥಿತರಿದ್ದರು.</p>.<p>ಹಿರಿಯ ಹಾಗೂ ಸಾಧಕ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಇಂಡಿಯಾ ಸ್ವೀಟ್ ಹೌಸ್ ನೀಡಿದ ಸಿಹಿ ತಿನಿಸು ಪ್ಯಾಕೆಟ್ ಹಾಗೂ ವಿಶೇಷ ಕ್ಯಾಪ್ ಅನ್ನು ಪೌರಕಾರ್ಮಿಕರಿಗೆ ನೀಡಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಮಹಾನಗರ ಪಾಲಿಕೆಯ ಅಭಿವೃದ್ಧಿಯಲ್ಲಿ ಪೌರಕಾರ್ಮಿಕರ ಕೊಡುಗೆ ಗಮನಾರ್ಹವಾದುದು ಎಂದು ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಹೇಳಿದರು. </p>.<p>ಮಹಾನಗರ ಪಾಲಿಕೆ ವತಿಯಿಂದ ಮಂಗಳವಾರ ಇಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಪೌರ ಕಾರ್ಮಿಕರಿಂದಾಗಿ ಮಹಾನಗರ ಪಾಲಿಕೆಗೆ ಗೌರವ ದೊರಕಿದೆ. ಪೌರಕಾರ್ಮಿಕರು ದೈನಂದಿನ ಜಂಟಾಟಗಳಿಂದ ದೂರ ಇದ್ದು, ಸಂಭ್ರಮಿಸಲು ಪೌರ ಕಾರ್ಮಿಕರ ದಿನ ಆಚರಿಸಲಾಗುತ್ತದೆ ಎಂದರು.</p>.<p>ಪಾಲಿಕೆ ಸಮುದಾಯ ಸಂಘಟನಾಧಿಕಾರಿ ಮಾಲಿನಿ ರೋಡ್ರಿಗಸ್ ಮಾತನಾಡಿ, ನಗರ ಸ್ವಚ್ಛತೆಯ ಜೊತೆಗೆ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಪೌರ ಕಾರ್ಮಿಕರಿಗೆ ಪಾಲಿಕೆ ವಿಮೆ ಮಾಡಿಸಿದ್ದು, ಈ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವುದಕ್ಕಿಂತ ಮೊದಲು ಮಾಹಿತಿ ನೀಡಬೇಕು. ಈ ವರ್ಷ ಆರೋಗ್ಯ ನಿಧಿಯನ್ನು ₹5 ಲಕ್ಷಕ್ಕೆ ಏರಿಸಲಾಗಿದೆ ಎಂದರು.</p>.<p>ಪಾಲಿಕೆ ಆರೋಗ್ಯಾಧಿಕಾರಿ ಡಾ. ಮಂಜಯ್ಯ ಶೆಟ್ಟಿ, ವಲಯ ಆಯುಕ್ತೆ ವಾಣಿ ಆಳ್ವ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ದೀಪ್ತಿ ಎನ್., ದಕ್ಷಿಣ ಕನ್ನಡ ಜಿಲ್ಲಾ ಪೌರ ಕಾರ್ಮಿಕ ಸಂಘದ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಎಸ್.ಪಿ.ಆನಂದ್ ಉಪಸ್ಥಿತರಿದ್ದರು.</p>.<p>ಹಿರಿಯ ಹಾಗೂ ಸಾಧಕ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಇಂಡಿಯಾ ಸ್ವೀಟ್ ಹೌಸ್ ನೀಡಿದ ಸಿಹಿ ತಿನಿಸು ಪ್ಯಾಕೆಟ್ ಹಾಗೂ ವಿಶೇಷ ಕ್ಯಾಪ್ ಅನ್ನು ಪೌರಕಾರ್ಮಿಕರಿಗೆ ನೀಡಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>