ಮಂಗಳೂರು: ನೆಲ್ಯಾಡಿ -ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೀರಕಟ್ಟೆ ಸಮೀಪ ಪಿಕಪ್ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕ ಹೊಳೆಗೆ ಬಿದ್ದಿದ್ದು, ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.
ಬೆಳಿಗ್ಗೆ 11 ಗಂಟೆ ವೇಳೆ ಈ ಘಟನೆ ನಡೆದಿದೆ. ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಪಿಕಪ್ ನೀರಕಟ್ಟೆ ಸಮೀಪದ ಕಾಂಚನ ಕ್ರಾಸ್ ಸಮೀಪ ಚಾಲಕ ಆರೀಫ್ ಕೋಲ್ಪೆ ಅವರ ನಿಯಂತ್ರಣ ತಪ್ಪಿ ಪಕ್ಕದ ಹೊಳೆಗೆ ಬಿದ್ದಿದೆ.
ಆರೀಫ್ ಅವರು ಪಿಕ್ಅಪ್ ವಾಹನದಿಂದ ಹೊರಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರ ಸಹಾಯದಿಂದ ಜೀಪನ್ನು ಹೊಳೆಯಿಂದ ಮೇಲಕ್ಕೆ ತರಲಾಯಿತು.