<p><strong>ಮಂಗಳೂರು:</strong> ನಗರ ಹೊರವಲಯದ ಉಳಾಯಿಬೆಟ್ಟು ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಜಾರ್ಖಂಡನ ಕುಟುಂಬದ ಎಂಟು ವರ್ಷದ ಹೆಣ್ಣು ಮಗುವಿನ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೂ ಮುನ್ನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ.<br /><br />ಮಧ್ಯಪ್ರದೇಶದ ಮೂವರು ಹಾಗೂ ಜಾರ್ಖಂಡ್ ರಾಜ್ಯದ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರೆಲ್ಲರೂ ಅದೇ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಕಾರ್ಮಿಕರಾಗಿದ್ದಾರೆ.<br /><br />ಬಡ ಕುಟುಂಬದ ಬಾಲಕಿಯ ಮೇಲೆ ಕಣ್ಣಿಟ್ಟಿದ್ದ ಆರೋಪಿಗಳು ಭಾನುವಾರ (ನ.21) ಮಧ್ಯಾಹ್ನ ಆಟವಾಡುತ್ತಿದ್ದ ಬಾಲಕಿಯನ್ನು ಅದೇ ಕಾರ್ಖಾನೆಯ ಆವರಣದಲ್ಲಿದ್ದ ರೂಂಗೆ ಕರೆದೊಯ್ದಿದ್ದಾರೆ. ನಂತರ ಬಾಲಕಿಯ ಮೇಲೆ ಮೂವರು ಅತ್ಯಾಚಾರ ನಡೆಸಿದ್ದಾರೆ.<br /><br />ಇದರಿಂದ ಬಾಲಕಿಗೆ ಆಘಾತ ಆಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಬಾಲಕಿ ಕಿರಚಾಡಲು ಆರಂಭಿಸಿದ್ದು, ಒಬ್ಬ ಆರೋಪಿ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಕೃತ್ಯದ ಬಳಿಕ ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ನೀರು ಹರಿಯುವ ಚರಂಡಿಗೆ ಬಾಲಕಿಯ ಶವವನ್ನು ಎಸೆದಿದ್ದಾರೆ.<br /><br />ಸಂಜೆ ನಾಲ್ಕು ಗಂಟೆಗೆ ಬಾಲಕಿ ಕಾಣಿಸದೇ ಇರುವುದರಿಂದ ಪಾಲಕರು ಹುಡುಕಾಟ ಆರಂಭಿಸಿದ್ದರು. ಟೈಲ್ಸ್ ಫ್ಯಾಕ್ಟರಿಯ ಸ್ವಲ್ಪ ದೂರದಲ್ಲಿರುವ ನೀರು ಹರಿಯುವ ಚರಂಡಿಯಲ್ಲಿ ಸಂಜೆ 6 ಗಂಟೆಗೆ ಬಾಲಕಿಯ ಶವ ಪತ್ತೆಯಾಗಿತ್ತು.<br /><br />ಟೈಲ್ಸ್ ಫ್ಯಾಕ್ಟರಿಯಲ್ಲಿ 30 ಜನರು ಕೆಲಸ ಮಾಡುತ್ತಿದ್ದಾರೆ. ಭಾನುವಾರ ಆಗಿದ್ದರಿಂದ 19 ಜನ ಕೆಲಸಕ್ಕೆ ಬಂದಿದ್ದರು. ಇದರಲ್ಲಿ ಬಹುತೇಕ ಜನರು ಉತ್ತರ ಭಾರತದವರೇ ಆಗಿದ್ದಾರೆ. ಕೃತ್ಯ ನಡೆದ ದಿನವೇ 10ರಿಂದ 15 ಮಂದಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು.<br /><br />ಸೂಕ್ತ ಸಾಕ್ಷಿಗಳನ್ನು ಸಂಗ್ರಹಿಸಿ ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.</p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/karnataka-news/illegal-assets-case-acb-officers-raid-in-across-karnataka-bengaluru-886580.html" target="_blank">ಆದಾಯಕ್ಕಿಂತ ಹೆಚ್ಚು ಆಸ್ತಿ: 15 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ</a></strong></p>.<p><a href="https://www.prajavani.net/district/kalaburagi/illegal-assets-case-acb-raid-in-kalaburagi-district-886591.html" target="_blank"><strong>ಕಲಬುರಗಿ: ಜೆ.ಇ. ಶಾಂತಗೌಡ ಬಿರಾದಾರ ಮನೆಗಳ ಮೇಲೆ ಎಸಿಬಿ ದಾಳಿ</strong></a></p>.<p><a href="https://www.prajavani.net/district/dakshina-kannada/illegal-assets-case-acb-raid-in-mangalore-city-886599.html" target="_blank"><strong>ಮಂಗಳೂರು: ಎಂಜಿನಿಯರ್ ಲಿಂಗೇಗೌಡ ಮನೆ ಮೇಲೆ ಎಸಿಬಿ ದಾಳಿ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ನಗರ ಹೊರವಲಯದ ಉಳಾಯಿಬೆಟ್ಟು ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಜಾರ್ಖಂಡನ ಕುಟುಂಬದ ಎಂಟು ವರ್ಷದ ಹೆಣ್ಣು ಮಗುವಿನ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೂ ಮುನ್ನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ.<br /><br />ಮಧ್ಯಪ್ರದೇಶದ ಮೂವರು ಹಾಗೂ ಜಾರ್ಖಂಡ್ ರಾಜ್ಯದ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರೆಲ್ಲರೂ ಅದೇ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಕಾರ್ಮಿಕರಾಗಿದ್ದಾರೆ.<br /><br />ಬಡ ಕುಟುಂಬದ ಬಾಲಕಿಯ ಮೇಲೆ ಕಣ್ಣಿಟ್ಟಿದ್ದ ಆರೋಪಿಗಳು ಭಾನುವಾರ (ನ.21) ಮಧ್ಯಾಹ್ನ ಆಟವಾಡುತ್ತಿದ್ದ ಬಾಲಕಿಯನ್ನು ಅದೇ ಕಾರ್ಖಾನೆಯ ಆವರಣದಲ್ಲಿದ್ದ ರೂಂಗೆ ಕರೆದೊಯ್ದಿದ್ದಾರೆ. ನಂತರ ಬಾಲಕಿಯ ಮೇಲೆ ಮೂವರು ಅತ್ಯಾಚಾರ ನಡೆಸಿದ್ದಾರೆ.<br /><br />ಇದರಿಂದ ಬಾಲಕಿಗೆ ಆಘಾತ ಆಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಬಾಲಕಿ ಕಿರಚಾಡಲು ಆರಂಭಿಸಿದ್ದು, ಒಬ್ಬ ಆರೋಪಿ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಕೃತ್ಯದ ಬಳಿಕ ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ನೀರು ಹರಿಯುವ ಚರಂಡಿಗೆ ಬಾಲಕಿಯ ಶವವನ್ನು ಎಸೆದಿದ್ದಾರೆ.<br /><br />ಸಂಜೆ ನಾಲ್ಕು ಗಂಟೆಗೆ ಬಾಲಕಿ ಕಾಣಿಸದೇ ಇರುವುದರಿಂದ ಪಾಲಕರು ಹುಡುಕಾಟ ಆರಂಭಿಸಿದ್ದರು. ಟೈಲ್ಸ್ ಫ್ಯಾಕ್ಟರಿಯ ಸ್ವಲ್ಪ ದೂರದಲ್ಲಿರುವ ನೀರು ಹರಿಯುವ ಚರಂಡಿಯಲ್ಲಿ ಸಂಜೆ 6 ಗಂಟೆಗೆ ಬಾಲಕಿಯ ಶವ ಪತ್ತೆಯಾಗಿತ್ತು.<br /><br />ಟೈಲ್ಸ್ ಫ್ಯಾಕ್ಟರಿಯಲ್ಲಿ 30 ಜನರು ಕೆಲಸ ಮಾಡುತ್ತಿದ್ದಾರೆ. ಭಾನುವಾರ ಆಗಿದ್ದರಿಂದ 19 ಜನ ಕೆಲಸಕ್ಕೆ ಬಂದಿದ್ದರು. ಇದರಲ್ಲಿ ಬಹುತೇಕ ಜನರು ಉತ್ತರ ಭಾರತದವರೇ ಆಗಿದ್ದಾರೆ. ಕೃತ್ಯ ನಡೆದ ದಿನವೇ 10ರಿಂದ 15 ಮಂದಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು.<br /><br />ಸೂಕ್ತ ಸಾಕ್ಷಿಗಳನ್ನು ಸಂಗ್ರಹಿಸಿ ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.</p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/karnataka-news/illegal-assets-case-acb-officers-raid-in-across-karnataka-bengaluru-886580.html" target="_blank">ಆದಾಯಕ್ಕಿಂತ ಹೆಚ್ಚು ಆಸ್ತಿ: 15 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ</a></strong></p>.<p><a href="https://www.prajavani.net/district/kalaburagi/illegal-assets-case-acb-raid-in-kalaburagi-district-886591.html" target="_blank"><strong>ಕಲಬುರಗಿ: ಜೆ.ಇ. ಶಾಂತಗೌಡ ಬಿರಾದಾರ ಮನೆಗಳ ಮೇಲೆ ಎಸಿಬಿ ದಾಳಿ</strong></a></p>.<p><a href="https://www.prajavani.net/district/dakshina-kannada/illegal-assets-case-acb-raid-in-mangalore-city-886599.html" target="_blank"><strong>ಮಂಗಳೂರು: ಎಂಜಿನಿಯರ್ ಲಿಂಗೇಗೌಡ ಮನೆ ಮೇಲೆ ಎಸಿಬಿ ದಾಳಿ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>