ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ ಮಣಿಪಾಲದ ಮನೆಗೆ ಪೊಲೀಸರು

Last Updated 22 ಜನವರಿ 2020, 7:36 IST
ಅಕ್ಷರ ಗಾತ್ರ

ಉಡುಪಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ ಕುಟುಂಬ 8 ತಿಂಗಳ ಹಿಂದೆ ಮಣಿಪಾಲದ ಮಣ್ಣಪಳ್ಳದಲ್ಲಿ ವಾಸವಿತ್ತು ಎಂಬ ವಿಚಾರ ತಿಳಿದು ಬಂದಿದೆ.

ಅನಾರೋಗ್ಯದಿಂದ ಕೆಲ ತಿಂಗಳುಗಳ ಹಿಂದಷ್ಟೆ ಆದಿತ್ಯನ ತಾಯಿ ತೀರಿಹೋದರು. ಬಳಿಕ ಆದಿತ್ಯ ರಾವ್ ಕುಟುಂಬ ಮಣ್ಣಪಳ್ಳದ ಮನೆ ಖಾಲಿ ಮಾಡಿ ಮಂಗಳೂರಿನಲ್ಲಿ ನೆಲೆಸಿತ್ತು ಎಂದು ನೆರೆಮನೆಯವರು ಮಾಹಿತಿ ನೀಡಿದರು.

ಆದಿತ್ಯ ಯಾರೊಂದಿಗೂ ಹೆಚ್ಚು ಬೆರೆಯುತ್ತಿರಲಿಲ್ಲ. ಆದರೆ, ಅವರ ತಾಯಿ ಅನಾರೋಗ್ಯದ ವಿಚಾರವಾಗಿ ಆಗಾಗ ಮಾತನಾಡುತ್ತಿದ್ದರು ಎಂದು ನೆರೆಮನೆಯ ದಿವ್ಯಾ ಕಿಣಿ ಹಾಗೂ ಪೂರ್ಣಿಮಾ ತಿಳಿಸಿದರು.

ಈಚೆಗೆ ಮನೆಯಲ್ಲಿದ್ದ ಕಪಾಟು ಸೇರಿದಂತೆ ಕೆಲವು ವಸ್ತುಗಳನ್ನು ಮಂಗಳೂರಿಗೆ ಸಾಗಿಸಲಾಗಿದೆ. ಮನೆಯಲ್ಲಿ ಕೆಲವು ಗೃಹೋಪಯೋಗಿ ವಸ್ತುಗಳು ಮಾತ್ರ ಇವೆ. ಹೆಚ್ಚಾಗಿ ಯಾರೂ ಇಲ್ಲಿ ಉಳಿಯುತ್ತಿರಲಿಲ್ಲ ಎಂದು ಹೇಳಿದರು.

ಮನೆಯಲ್ಲಿ ಶೋಧ:
ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದು ಆದಿತ್ಯ ರಾವ್ ಎಂಬ ಮಾಹಿತಿ ಸಿಗುತ್ತಿದ್ದಂತೆ ಈಚೆಗೆ ಮಂಗಳೂರಿನಿಂದ ಪೊಲೀಸರ ತಂಡ ಮಣಿಪಾಲದ ಆದಿತ್ಯ ರಾವ್ ನಿವಾಸಕ್ಕೆ ಭೇಟಿನೀಡಿ ಶೋಧ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT