ಪೌರತ್ವ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಭಾನುವಾರ ಪ್ರತಿಭಟನೆ ನಡೆದಿತ್ತು. ಸಂಜೆ ವೇಳೆಗೆ ಪ್ರತಿಭಟನೆ ಮುಕ್ತಾಯವಾಗಿತ್ತು. ರಾತ್ರಿ ಕುರ್ಚಿ, ಶಾಮಿಯಾನವನ್ನು ಲಾರಿಗೆ ತುಂಬಿಸಿ ಅಲ್ಲಿಯೇ ನಿಲ್ಲಿಸಲಾಗಿತ್ತು. ಸೋಮವಾರ ಬೆಳಿಗ್ಗೆ 3.30ರ ಸುಮಾರಿಗೆ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೆಲವೇ ಕ್ಷಣಗಳಲ್ಲಿ ಲಾರಿ ಹೊತ್ತಿ ಉರಿದಿದೆ.