<p><strong>ಮಂಗಳೂರು</strong>: ಇಂದು ಸಾಕಷ್ಟು ಸೌಲಭ್ಯ, ಅವಕಾಶಗಳಿದ್ದರೂ ನಮ್ಮ ದೇಶದಲ್ಲಿ ಕ್ರೀಡಾಪಟುಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸ್ಪೋರ್ಟ್ಸ್ ಕೋಟಾದಡಿ ಉದ್ಯೋಗ ನೀಡುವುದು ಕಡಿಮೆಯಾಗುತ್ತಿದೆ ಎಂದು ಅಂತರರಾಷ್ಟ್ರೀಯ ದೇಹದಾರ್ಢ್ಯ ಪಟು, ಮಿ. ವರ್ಲ್ಡ್ ರೇಮಂಡ್ ಡಿಸೋಜ ಹೇಳಿದರು.</p>.<p>ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ‘ತಿಂಗಳ ಸಾಧಕರು’ ಸನ್ಮಾನ ಸ್ವೀಕರಿಸಿ ಸಂವಾದ ನಡೆಸಿದ ಅವರು ತಮ್ಮ ಜೀವನದ ಬಗ್ಗೆ ಮೆಲುಕು ಹಾಕಿದರು.</p>.<p>ಇಂದು ಭಾರ ಎತ್ತುವ ಸ್ಪರ್ಧೆಗಳಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮಾಯಾಗುತ್ತಿದೆ. ಒಲಿಂಪಿಕ್ನಲ್ಲಿ ಈ ಸ್ಪರ್ಧೆಗೆ ಹೆಚ್ಚಿನ ಮಹತ್ವವಿದೆ. ಆದ್ದರಿಂದ ಯುವಕರು ಮುಂದೆ ಬರಬೇಕು ಎಂದರು.</p>.<p>ಪ್ರಾಕೃತಿಕ ಆಹಾರ ಪದ್ಧತಿಯನ್ನೇ ಅನುಸರಿಸಬೇಕು. ಇದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ನಾನು ದೇಹದಾರ್ಢ್ಯ ಪಟುವಾಗಿದ್ದಾಗ ಡಯಟ್ನಲ್ಲಿ ಚಪಾತಿ, ಎಳನೀರು, ಅದರ ಗಂಜಿ ಜೊತೆ ಅವಲಕ್ಕಿ, ಹಾಲು, ನಾಟಿ ಕೋಳಿ ಮೊಟ್ಟೆ, ತರಕಾರಿ, ಸೊಪ್ಪು, ಗೆಡ್ಡೆ– ಗೆಣಸು ಸೇವಿಸುತ್ತಿದ್ದೆ ಎಂದು ಮೆಲುಕು ಹಾಕಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಇಂದು ಸಾಕಷ್ಟು ಸೌಲಭ್ಯ, ಅವಕಾಶಗಳಿದ್ದರೂ ನಮ್ಮ ದೇಶದಲ್ಲಿ ಕ್ರೀಡಾಪಟುಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸ್ಪೋರ್ಟ್ಸ್ ಕೋಟಾದಡಿ ಉದ್ಯೋಗ ನೀಡುವುದು ಕಡಿಮೆಯಾಗುತ್ತಿದೆ ಎಂದು ಅಂತರರಾಷ್ಟ್ರೀಯ ದೇಹದಾರ್ಢ್ಯ ಪಟು, ಮಿ. ವರ್ಲ್ಡ್ ರೇಮಂಡ್ ಡಿಸೋಜ ಹೇಳಿದರು.</p>.<p>ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ‘ತಿಂಗಳ ಸಾಧಕರು’ ಸನ್ಮಾನ ಸ್ವೀಕರಿಸಿ ಸಂವಾದ ನಡೆಸಿದ ಅವರು ತಮ್ಮ ಜೀವನದ ಬಗ್ಗೆ ಮೆಲುಕು ಹಾಕಿದರು.</p>.<p>ಇಂದು ಭಾರ ಎತ್ತುವ ಸ್ಪರ್ಧೆಗಳಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮಾಯಾಗುತ್ತಿದೆ. ಒಲಿಂಪಿಕ್ನಲ್ಲಿ ಈ ಸ್ಪರ್ಧೆಗೆ ಹೆಚ್ಚಿನ ಮಹತ್ವವಿದೆ. ಆದ್ದರಿಂದ ಯುವಕರು ಮುಂದೆ ಬರಬೇಕು ಎಂದರು.</p>.<p>ಪ್ರಾಕೃತಿಕ ಆಹಾರ ಪದ್ಧತಿಯನ್ನೇ ಅನುಸರಿಸಬೇಕು. ಇದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ನಾನು ದೇಹದಾರ್ಢ್ಯ ಪಟುವಾಗಿದ್ದಾಗ ಡಯಟ್ನಲ್ಲಿ ಚಪಾತಿ, ಎಳನೀರು, ಅದರ ಗಂಜಿ ಜೊತೆ ಅವಲಕ್ಕಿ, ಹಾಲು, ನಾಟಿ ಕೋಳಿ ಮೊಟ್ಟೆ, ತರಕಾರಿ, ಸೊಪ್ಪು, ಗೆಡ್ಡೆ– ಗೆಣಸು ಸೇವಿಸುತ್ತಿದ್ದೆ ಎಂದು ಮೆಲುಕು ಹಾಕಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>