ಮಿಜಾರಿನ ಆಳ್ವಾಸ್ ಹೊಮಿಯೋಪತಿ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ನಡೆದ ‘ಆಳ್ವಾಸ್ ಪುನರ್ಜನ್ಮ’ದ 3ನೇ ವರ್ಷದ ವಾರ್ಷಿಕೋತ್ಸವ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಹುಟ್ಟುತ್ತಾ ಯಾರೂ ಕೆಟ್ಟವರಾಗಿರುವುದಿಲ್ಲ. ಆದರೆ, ಬೆಳೆಯುತ್ತಾ ನಮಗೆ ಲಭಿಸುವ ಪರಿಸರದ ವಾತಾವರಣ ಹಾಗೂ ಸಹವಾಸ ನಮ್ಮನ್ನು ಬದಲಾಯಿಸುತ್ತದೆ. ಮನುಷ್ಯನ ಜೀವನದಲ್ಲಿ ತಪ್ಪು ಸಹಜ. ತಪ್ಪುಗಳನ್ನು ತಿದ್ದಿಕೊಂಡು ಜೀವನದಲ್ಲಿ ಸರಿ ದಾರಿಯತ್ತ ಮುನ್ನಡೆಯಬೇಕು ಎಂದರು.