<p><strong>ಮಂಗಳೂರು:</strong> ಹಿಂದೂ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹಸಚಿವ ಜಿ.ಪರಮೇಶ್ವರ ತಿಳಿಸಿದರು.</p>.ಸಂಘಟನೆಗಳ ನಾಯಕರು ತಿರುಗಿಯೂ ನೋಡುವುದಿಲ್ಲ: ಸುಹಾಸ್ ಶೆಟ್ಟಿ ತಂದೆ.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ' ಎಲ್ಲ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ' ಎಂದರು.</p><p>ಆರೋಪಿಗಳ ವಿವರ ನೀಡಿದ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ 'ಕಿನ್ನಿಪದವಿನಲ್ಲಿ ಮೇ 1 ರಂದು ರಾತ್ರಿ ಸುಹಾಸ್ ಶೆಟ್ಟಿ ಕೊಲೆ ನಡೆದಿತ್ತು. ಕಿನ್ನಿಪದವಿನಲ್ಲಿ ವಾಸವಾಗಿರುವ ಪೇಜಾವರ ಗ್ರಾಮದ ಶಾಂತಿಗುಡ್ಡೆಯ ಅಬ್ದುಲ್ ಸಫ್ವಾನ್ ( 29), ಶಾಂತಿಗುಡ್ಡೆಯ ನಿಯಾಜ್ (28), ಕೆಂಜಾರು ಗ್ರಾಮದ ಮೊಹಮ್ಮದ್ ಮುಝಮಿಲ್ (32), ಕಳವಾರು ಕುರ್ಸುಗುಡ್ಡೆಯ ಕಲಂದರ್ ಶಾಫಿ (31), ಚಿಕ್ಕಮಂಗಳೂರು ಜಿಲ್ಲೆಯ ಕಳಸ ತಾಲ್ಲೂಕಿನ ರುದ್ರಪಾದೆಯ ರಂಜಿತ್ (19), ಕಳಸ ಕೋಟೆ ಹೊಳೆ ಮಾವಿನಕೆರೆ ಗ್ರಾಮದ ನಾಗರಾಜ್ (20), ಜೋಕಟ್ಟೆಯ ಮೊಹಮ್ಮದ್ ರಿಜ್ವಾನ್ (28) ಹಾಗೂ ಕಾಟಿಪಳ್ಳ ಮಂಗಳಪೇಟೆಯ ಅದಿಲ್ ಮೆಹರೂಫ್ ಬಂಧಿತ ಆರೋಪಿಗಳು ಎಂದು ಮಾಹಿತಿ ನೀಡಿದರು.</p>.ಕಾರಿಂಜ: ಸುಹಾಸ್ ಶೆಟ್ಟಿ ಮೃತದೇಹದ ಅಂತಿಮ ದರ್ಶನ ಪಡೆದ ವಿಜಯೇಂದ್ರ, ಆರ್.ಅಶೋಕ.<p>ಸಫ್ವಾನ್ ಮೇಲೆ 2023ರಲ್ಲಿ ಸುರತ್ಕಲ್ನಲ್ಲಿ ಸುಹಾಸ್ ಶೆಟ್ಟಿ ಸಹಚರ ಪ್ರಶಾಂತ್ ಹಾಗೂ ಧನರಾಜ್ ಮತ್ತಿತರರು ಹಲ್ಲೆ ನಡೆಸಿದ್ದರು. ಸುಹಾಸ್ ಶೆಟ್ಟಿ ತನ್ನನ್ನು ಕೊಲೆ ಮಾಡಬಹುದು ಎಂಬ ಭಯ ಸಫ್ವಾನ್ ಗೆ ಇತ್ತು. ಆತ 2022ರಲ್ಲಿ ಸುರತ್ಕಲ್ನಲ್ಲಿ ಕೊಲೆಯಾಗಿದ್ದ ಮಹಮ್ಮದ್ ಫಾಝಿಲ್ ಸೋದರ ಆದಿಲ್ನನ್ನು ಈಚೆಗೆ ಸಂಪರ್ಕಿಸಿದ್ದ. ಫಾಝಿಲ್ ಹತ್ಯೆಯ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಸಲುವಾಗಿ ಆದಿಲ್ ₹ 5 ಲಕ್ಷ ನೀಡಲು ಒಪ್ಪಿದ್ದ , ₹ 3 ಲಕ್ಷ ನೀಡಿದ್ದ ಎಂದರು. </p><p> ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಪೊಲೀಸ್ ಕಸ್ಟಡಿಗೆ ಪಡೆಯುತ್ತೇವೆ. ಅವರ ವಿಚಾರಣೆ ಬಳಿಕ ಹತ್ಯೆಯ ಸಮಗ್ರ ವಿವರ ಸಿಗಲಿದೆ ಎಂದರು.</p>.ಮಂಗಳೂರು | ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ: ಮೇ 6 ರವರೆಗೆ ನಿಷೇಧಾಜ್ಞೆ ಜಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಹಿಂದೂ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹಸಚಿವ ಜಿ.ಪರಮೇಶ್ವರ ತಿಳಿಸಿದರು.</p>.ಸಂಘಟನೆಗಳ ನಾಯಕರು ತಿರುಗಿಯೂ ನೋಡುವುದಿಲ್ಲ: ಸುಹಾಸ್ ಶೆಟ್ಟಿ ತಂದೆ.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ' ಎಲ್ಲ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ' ಎಂದರು.</p><p>ಆರೋಪಿಗಳ ವಿವರ ನೀಡಿದ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ 'ಕಿನ್ನಿಪದವಿನಲ್ಲಿ ಮೇ 1 ರಂದು ರಾತ್ರಿ ಸುಹಾಸ್ ಶೆಟ್ಟಿ ಕೊಲೆ ನಡೆದಿತ್ತು. ಕಿನ್ನಿಪದವಿನಲ್ಲಿ ವಾಸವಾಗಿರುವ ಪೇಜಾವರ ಗ್ರಾಮದ ಶಾಂತಿಗುಡ್ಡೆಯ ಅಬ್ದುಲ್ ಸಫ್ವಾನ್ ( 29), ಶಾಂತಿಗುಡ್ಡೆಯ ನಿಯಾಜ್ (28), ಕೆಂಜಾರು ಗ್ರಾಮದ ಮೊಹಮ್ಮದ್ ಮುಝಮಿಲ್ (32), ಕಳವಾರು ಕುರ್ಸುಗುಡ್ಡೆಯ ಕಲಂದರ್ ಶಾಫಿ (31), ಚಿಕ್ಕಮಂಗಳೂರು ಜಿಲ್ಲೆಯ ಕಳಸ ತಾಲ್ಲೂಕಿನ ರುದ್ರಪಾದೆಯ ರಂಜಿತ್ (19), ಕಳಸ ಕೋಟೆ ಹೊಳೆ ಮಾವಿನಕೆರೆ ಗ್ರಾಮದ ನಾಗರಾಜ್ (20), ಜೋಕಟ್ಟೆಯ ಮೊಹಮ್ಮದ್ ರಿಜ್ವಾನ್ (28) ಹಾಗೂ ಕಾಟಿಪಳ್ಳ ಮಂಗಳಪೇಟೆಯ ಅದಿಲ್ ಮೆಹರೂಫ್ ಬಂಧಿತ ಆರೋಪಿಗಳು ಎಂದು ಮಾಹಿತಿ ನೀಡಿದರು.</p>.ಕಾರಿಂಜ: ಸುಹಾಸ್ ಶೆಟ್ಟಿ ಮೃತದೇಹದ ಅಂತಿಮ ದರ್ಶನ ಪಡೆದ ವಿಜಯೇಂದ್ರ, ಆರ್.ಅಶೋಕ.<p>ಸಫ್ವಾನ್ ಮೇಲೆ 2023ರಲ್ಲಿ ಸುರತ್ಕಲ್ನಲ್ಲಿ ಸುಹಾಸ್ ಶೆಟ್ಟಿ ಸಹಚರ ಪ್ರಶಾಂತ್ ಹಾಗೂ ಧನರಾಜ್ ಮತ್ತಿತರರು ಹಲ್ಲೆ ನಡೆಸಿದ್ದರು. ಸುಹಾಸ್ ಶೆಟ್ಟಿ ತನ್ನನ್ನು ಕೊಲೆ ಮಾಡಬಹುದು ಎಂಬ ಭಯ ಸಫ್ವಾನ್ ಗೆ ಇತ್ತು. ಆತ 2022ರಲ್ಲಿ ಸುರತ್ಕಲ್ನಲ್ಲಿ ಕೊಲೆಯಾಗಿದ್ದ ಮಹಮ್ಮದ್ ಫಾಝಿಲ್ ಸೋದರ ಆದಿಲ್ನನ್ನು ಈಚೆಗೆ ಸಂಪರ್ಕಿಸಿದ್ದ. ಫಾಝಿಲ್ ಹತ್ಯೆಯ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಸಲುವಾಗಿ ಆದಿಲ್ ₹ 5 ಲಕ್ಷ ನೀಡಲು ಒಪ್ಪಿದ್ದ , ₹ 3 ಲಕ್ಷ ನೀಡಿದ್ದ ಎಂದರು. </p><p> ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಪೊಲೀಸ್ ಕಸ್ಟಡಿಗೆ ಪಡೆಯುತ್ತೇವೆ. ಅವರ ವಿಚಾರಣೆ ಬಳಿಕ ಹತ್ಯೆಯ ಸಮಗ್ರ ವಿವರ ಸಿಗಲಿದೆ ಎಂದರು.</p>.ಮಂಗಳೂರು | ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ: ಮೇ 6 ರವರೆಗೆ ನಿಷೇಧಾಜ್ಞೆ ಜಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>