ಮಂಗಳೂರು: ಡಿಸೆಂಬರ್ 19ರಂದು ನಗರದಲ್ಲಿ ನಡೆದ ಗಲಭೆ ಮತ್ತು ಗೋಲಿಬಾರ್ ಬಳಿಕ ಫೇಸ್ ಬುಕ್, ವಾಟ್ಸ್ ಆಪ್ ಮತ್ತಿತರ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶ ಕಳುಹಿಸಿ ಪೊಲೀಸರ ವಿರುದ್ಧ ದಾಳಿ ಮಾಡಿ, ರಕ್ತಪಾತ ನಡೆಸುವಂತೆ ಪ್ರಚೋದಿಸುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಸೈಬರ್ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ.