<p><strong>ಉಳ್ಳಾಲ:</strong> ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಷನ್ಸ್ (ಐಸಿಸಿಆರ್)ನ 75ನೇ ವರ್ಷದ ಸ್ಥಾಪನಾ ದಿನಾಚರಣೆ ಇತ್ತೀಚೆಗೆ ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ನಡೆಯಿತು.</p>.<p>ಮಂಗಳೂರು ವಿವಿ ಕುಲಸಚಿವ ಕೆ.ರಾಜು ಮೊಗವೀರ ಅವರು ಅಧ್ಯಕ್ಷತೆ ವಹಿಸಿದ್ದರು.</p>.<p>ಮಂಗಳೂರು ವಿವಿ ಹಾಗೂ ಅಂತರರಾಷ್ಟ್ರೀಯ ವಿದ್ಯಾರ್ಥಿಗಳ ನಡುವೆ ಅವಿನಾಭಾವ ಸಂಬಂಧ ಇದೆ. ಇಲ್ಲಿರುವ ವಿದ್ಯಾರ್ಥಿಗಳಿಂದ ಪರಸ್ಪರ ದೇಶಗಳ ನಡುವಿನ ಸಾಂಸ್ಕೃತಿಕ ಪರಂಪರೆಯನ್ನು ವಿಸ್ತರಿಸಲು ಸಾಧ್ಯವಾಗಿದೆ. ಶೈಕ್ಷಣಿಕ ಚಟುವಟಿಕೆ ಜೊತೆಗೆ ಇಲ್ಲಿನ ಯಕ್ಷಗಾನ, ದೈವಾರಾಧನೆಯ ಬಗೆಗೂ ಕೆಲವು ವಿದ್ಯಾರ್ಥಿಗಳು ಅರಿವನ್ನು ಬೆಳೆಸಿಕೊಂಡಿದ್ದಾರೆ ಎಂದರು.</p>.<p>ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ದೇವೇಂದ್ರಪ್ಪ, ಮಂಗಳೂರು ವಿವಿ ಇಂಟರ್ ನ್ಯಾಷನಲ್ ಸ್ಟೂಡೆಂಟ್ ಸೆಂಟರ್ ನಿರ್ದೇಶಕ ಪ್ರೊ.ಶೇಖರ್ ಮಾತನಾಡಿದರು.</p>.<p>ಐಸಿಸಿಆರ್ ಬೆಂಗಳೂರು ವಲಯ ನಿರ್ದೇಶಕ ಪ್ರದೀಪ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ನಿರ್ದೇಶಕ ವಿಶ್ವನಾಥ್ ವಂದಿಸಿದರು. ಸೃಷ್ಟಿ ಕಾರ್ಯಕ್ರಮ ನಿರೂಪಿಸಿದರು.</p>.<p>ಗೌರಿ ಸಾಗರ್ ಅವರಿಂದ ಭರತನಾಟ್ಯ ಹಾಗೂ ವಿವಿಯ ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಂದ ಸಂಗೀತ, ನೃತ್ಯ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ:</strong> ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಷನ್ಸ್ (ಐಸಿಸಿಆರ್)ನ 75ನೇ ವರ್ಷದ ಸ್ಥಾಪನಾ ದಿನಾಚರಣೆ ಇತ್ತೀಚೆಗೆ ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ನಡೆಯಿತು.</p>.<p>ಮಂಗಳೂರು ವಿವಿ ಕುಲಸಚಿವ ಕೆ.ರಾಜು ಮೊಗವೀರ ಅವರು ಅಧ್ಯಕ್ಷತೆ ವಹಿಸಿದ್ದರು.</p>.<p>ಮಂಗಳೂರು ವಿವಿ ಹಾಗೂ ಅಂತರರಾಷ್ಟ್ರೀಯ ವಿದ್ಯಾರ್ಥಿಗಳ ನಡುವೆ ಅವಿನಾಭಾವ ಸಂಬಂಧ ಇದೆ. ಇಲ್ಲಿರುವ ವಿದ್ಯಾರ್ಥಿಗಳಿಂದ ಪರಸ್ಪರ ದೇಶಗಳ ನಡುವಿನ ಸಾಂಸ್ಕೃತಿಕ ಪರಂಪರೆಯನ್ನು ವಿಸ್ತರಿಸಲು ಸಾಧ್ಯವಾಗಿದೆ. ಶೈಕ್ಷಣಿಕ ಚಟುವಟಿಕೆ ಜೊತೆಗೆ ಇಲ್ಲಿನ ಯಕ್ಷಗಾನ, ದೈವಾರಾಧನೆಯ ಬಗೆಗೂ ಕೆಲವು ವಿದ್ಯಾರ್ಥಿಗಳು ಅರಿವನ್ನು ಬೆಳೆಸಿಕೊಂಡಿದ್ದಾರೆ ಎಂದರು.</p>.<p>ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ದೇವೇಂದ್ರಪ್ಪ, ಮಂಗಳೂರು ವಿವಿ ಇಂಟರ್ ನ್ಯಾಷನಲ್ ಸ್ಟೂಡೆಂಟ್ ಸೆಂಟರ್ ನಿರ್ದೇಶಕ ಪ್ರೊ.ಶೇಖರ್ ಮಾತನಾಡಿದರು.</p>.<p>ಐಸಿಸಿಆರ್ ಬೆಂಗಳೂರು ವಲಯ ನಿರ್ದೇಶಕ ಪ್ರದೀಪ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ನಿರ್ದೇಶಕ ವಿಶ್ವನಾಥ್ ವಂದಿಸಿದರು. ಸೃಷ್ಟಿ ಕಾರ್ಯಕ್ರಮ ನಿರೂಪಿಸಿದರು.</p>.<p>ಗೌರಿ ಸಾಗರ್ ಅವರಿಂದ ಭರತನಾಟ್ಯ ಹಾಗೂ ವಿವಿಯ ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಂದ ಸಂಗೀತ, ನೃತ್ಯ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>