<p><strong>ಮಂಗಳೂರು:</strong> ‘ಕಾರ್ಬನ್ ಹೆಜ್ಜೆ ಗುರುತು ಕಡಿಮೆಗೊಳಿಸಲು ಎಲ್ಲರೂ ಬದುಕಿನ ಶೈಲಿಯನ್ನು ಬದಲಾಯಿಸಿಕೊಳ್ಳಬೇಕು. ಪದವೀಧರರೆಲ್ಲರೂ ಸುಸ್ಥಿರ ಜೀವನ ವಿಧಾನ ಅಳವಡಿಸಿಕೊಳ್ಳಬೇಕು. ಅದನ್ನೇ ಅಭಿವೃದ್ಧಿಯ ಹೊಸ ಮಾದರಿಯನ್ನಾಗಿ ಪರಿಗಣಿಸಬೇಕು’ ಎಂದು ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಸಂಶೋಧನೆ ಮತ್ತು ಮಾಹಿತಿ ವ್ಯವಸ್ಥೆಯ ಮಹಾನಿರ್ದೇಶಕ ಪ್ರೊ.ಸಚಿನ್ ಚತುರ್ವೇದಿ ಹೇಳಿದರು.</p>.<p>ಮಂಗಳೂರು ವಿಶ್ವವಿದ್ಯಾನಿಲಯದ 42ನೇ ಘಟಿಕೋತ್ಸವದಲ್ಲಿ ಅವರು ಶನಿವಾರ ಮಾತನಾಡಿದರು.</p>.<p>‘ಪರಿಸರಕ್ಕಾಗಿ ಜೀವನಶೈಲಿ (ಲೈಫ್) ಅಭಿಯಾನದ ಮುಖ್ಯ ಉದ್ದೇಶ ಸುಸ್ಥಿರ ಜೀವನಶೈಲಿಯನ್ನು ಸಾಮೂಹಿಕ ಅಭಿಯಾನವನ್ನಾಗಿ ರೂಪಿಸುವುದು. ವಿಜ್ಞಾನ ಮತ್ತು ಸಾಮಾಜಿಕ ವಿಜ್ಞಾನ ಕ್ಷೇತ್ರಗಳಲ್ಲಿ ಸಂಶೋಧನೆಯ ಹೊಸ ಸಾಧ್ಯತೆಗಳನ್ನು ಕಂಡುಕೊಳ್ಳಲು ಇದು ನೆರವಾಗಲಿದೆ. ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯಗಳಂತೆ ಪ್ರಮುಖ ಜ್ಞಾನ ಕೇಂದ್ರಗಳು ಮುಂದಾಲೋಚನೆಯಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ‘ ಎಂದರು. </p>.<p>ರಾಜ್ಯಪಾಲ ಥಾವರಚಂದ್ ಗೆಹಲೋತ್, ‘ತರಗತಿಗಳಲ್ಲಿ ಕಲಿತ ಜ್ಞಾನವು ಮನುಕುಲದ ಒಳತಿಗೆ ಬಳಕೆಯಾಗಬೇಕು. ಪರಿಸರ ಕಾಳಜಿ ಬೆಳೆಸುವಲ್ಲಿ ಪದವೀಧರರು ಹೆಚ್ಚಿನ ಹೊಣೆ ನಿಭಾಯಿಸಬೇಕು. ಸೌರಶಕ್ತಿಯಂತಹ ಸುಸ್ಥಿರ ಇಂಧನ ಬಳಕೆಗೆ ಆದ್ಯತೆ ನೀಡಬೇಕು‘ ಎಂದರು.</p>.<p>ಉದ್ಯಮಿಗಳಾದ ಎಂಆರ್ಜಿ ಬಳಗದ ಉದ್ಯಮಿ ಎಂಜಿಆರ್ ಸಮೂಹದ ಸಂಸ್ಥಾಪಕ ಕೆ.ಪ್ರಕಾಶ್ ಶೆಟ್ಟಿ ಹಾಗೂ ಉದ್ಯಮಿ ರೊನಾಲ್ಡ್ ಕೊಲಾಸೊ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಗೌರವ ಡಾಕ್ಟರೇಟ್ಗೆ ಆಯ್ಕೆಯಾಗಿದ್ದ ಉದ್ಯಮಿ ತುಂಬೆ ಮೊಯ್ದಿನ್ ಗೈರಾಗಿದ್ದರು.</p>.<p>ಕುಲಪತಿ ಪ್ರೊ.ಪಿ.ಎಲ್.ಧರ್ಮ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಕುಲಸಚಿವ ರಾಜು ಮೊಗವೀರ, ಕುಲಸಚಿವ (ಮೌಲ್ಯಮಾಪನ) ಪ್ರೊ.ಎಚ್.ದೇವೇಂದ್ರಪ್ಪ, ಹಣಕಾಸು ಅಧಿಕಾರಿ ಪ್ರೊ.ಸಂಗಪ್ಪ ವೈ. ವಿವಿಧ ನಿಖಾಯಗಳ ಮುಖ್ಯಸ್ಥರು ಭಾಗವಹಿಸಿದ್ದರು. ರ್ಯಾಂಕ್ ವಿಜೇತರಿಗೆ, ಪದಕ ವಿಜೇತ ವಿದ್ಯಾರ್ಥಿಗಳಿಗೆ ರಾಜ್ಯಪಾಲರು ಪ್ರಮಾಣಪತ್ರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಕಾರ್ಬನ್ ಹೆಜ್ಜೆ ಗುರುತು ಕಡಿಮೆಗೊಳಿಸಲು ಎಲ್ಲರೂ ಬದುಕಿನ ಶೈಲಿಯನ್ನು ಬದಲಾಯಿಸಿಕೊಳ್ಳಬೇಕು. ಪದವೀಧರರೆಲ್ಲರೂ ಸುಸ್ಥಿರ ಜೀವನ ವಿಧಾನ ಅಳವಡಿಸಿಕೊಳ್ಳಬೇಕು. ಅದನ್ನೇ ಅಭಿವೃದ್ಧಿಯ ಹೊಸ ಮಾದರಿಯನ್ನಾಗಿ ಪರಿಗಣಿಸಬೇಕು’ ಎಂದು ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಸಂಶೋಧನೆ ಮತ್ತು ಮಾಹಿತಿ ವ್ಯವಸ್ಥೆಯ ಮಹಾನಿರ್ದೇಶಕ ಪ್ರೊ.ಸಚಿನ್ ಚತುರ್ವೇದಿ ಹೇಳಿದರು.</p>.<p>ಮಂಗಳೂರು ವಿಶ್ವವಿದ್ಯಾನಿಲಯದ 42ನೇ ಘಟಿಕೋತ್ಸವದಲ್ಲಿ ಅವರು ಶನಿವಾರ ಮಾತನಾಡಿದರು.</p>.<p>‘ಪರಿಸರಕ್ಕಾಗಿ ಜೀವನಶೈಲಿ (ಲೈಫ್) ಅಭಿಯಾನದ ಮುಖ್ಯ ಉದ್ದೇಶ ಸುಸ್ಥಿರ ಜೀವನಶೈಲಿಯನ್ನು ಸಾಮೂಹಿಕ ಅಭಿಯಾನವನ್ನಾಗಿ ರೂಪಿಸುವುದು. ವಿಜ್ಞಾನ ಮತ್ತು ಸಾಮಾಜಿಕ ವಿಜ್ಞಾನ ಕ್ಷೇತ್ರಗಳಲ್ಲಿ ಸಂಶೋಧನೆಯ ಹೊಸ ಸಾಧ್ಯತೆಗಳನ್ನು ಕಂಡುಕೊಳ್ಳಲು ಇದು ನೆರವಾಗಲಿದೆ. ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯಗಳಂತೆ ಪ್ರಮುಖ ಜ್ಞಾನ ಕೇಂದ್ರಗಳು ಮುಂದಾಲೋಚನೆಯಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ‘ ಎಂದರು. </p>.<p>ರಾಜ್ಯಪಾಲ ಥಾವರಚಂದ್ ಗೆಹಲೋತ್, ‘ತರಗತಿಗಳಲ್ಲಿ ಕಲಿತ ಜ್ಞಾನವು ಮನುಕುಲದ ಒಳತಿಗೆ ಬಳಕೆಯಾಗಬೇಕು. ಪರಿಸರ ಕಾಳಜಿ ಬೆಳೆಸುವಲ್ಲಿ ಪದವೀಧರರು ಹೆಚ್ಚಿನ ಹೊಣೆ ನಿಭಾಯಿಸಬೇಕು. ಸೌರಶಕ್ತಿಯಂತಹ ಸುಸ್ಥಿರ ಇಂಧನ ಬಳಕೆಗೆ ಆದ್ಯತೆ ನೀಡಬೇಕು‘ ಎಂದರು.</p>.<p>ಉದ್ಯಮಿಗಳಾದ ಎಂಆರ್ಜಿ ಬಳಗದ ಉದ್ಯಮಿ ಎಂಜಿಆರ್ ಸಮೂಹದ ಸಂಸ್ಥಾಪಕ ಕೆ.ಪ್ರಕಾಶ್ ಶೆಟ್ಟಿ ಹಾಗೂ ಉದ್ಯಮಿ ರೊನಾಲ್ಡ್ ಕೊಲಾಸೊ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಗೌರವ ಡಾಕ್ಟರೇಟ್ಗೆ ಆಯ್ಕೆಯಾಗಿದ್ದ ಉದ್ಯಮಿ ತುಂಬೆ ಮೊಯ್ದಿನ್ ಗೈರಾಗಿದ್ದರು.</p>.<p>ಕುಲಪತಿ ಪ್ರೊ.ಪಿ.ಎಲ್.ಧರ್ಮ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಕುಲಸಚಿವ ರಾಜು ಮೊಗವೀರ, ಕುಲಸಚಿವ (ಮೌಲ್ಯಮಾಪನ) ಪ್ರೊ.ಎಚ್.ದೇವೇಂದ್ರಪ್ಪ, ಹಣಕಾಸು ಅಧಿಕಾರಿ ಪ್ರೊ.ಸಂಗಪ್ಪ ವೈ. ವಿವಿಧ ನಿಖಾಯಗಳ ಮುಖ್ಯಸ್ಥರು ಭಾಗವಹಿಸಿದ್ದರು. ರ್ಯಾಂಕ್ ವಿಜೇತರಿಗೆ, ಪದಕ ವಿಜೇತ ವಿದ್ಯಾರ್ಥಿಗಳಿಗೆ ರಾಜ್ಯಪಾಲರು ಪ್ರಮಾಣಪತ್ರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>