<p><strong>ಮಂಗಳೂರು:</strong> ’ಮಂಗಳೂರು ವಿಶ್ವವಿದ್ಯಾಲಯವು ಶೀಘ್ರದಲ್ಲೇ ಯುಜಿಸಿ ನಿಯಮಗಳ ಅನ್ವಯ ಪರಿಷ್ಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದೆ’ ಎಂದು ಕುಲಸಚಿವ ಕೆ. ರಾಜು ಮೊಗವೀರ ಹೇಳಿದರು.</p>.<p>ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜಿಗೆ ಭೇಟಿ ನೀಡಿದ ಅವರು, ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಯೊಂದಿಗೆ ಮಾತನಾಡಿದರು.</p>.<p>’ಪರಿಷ್ಕೃತ ವೇಳಾಪಟ್ಟಿಯಿಂದ ವಿದ್ಯಾರ್ಥಿಗಳು, ಪೋಷಕರು, ಪ್ರಾಧ್ಯಾಪಕರು ಆತಂಕ ಪಡಬೇಕಾಗಿಲ್ಲ. ಪದವಿಯ ಎಲ್ಲ ವಿದ್ಯಾರ್ಥಿಗಳಿಗೆ ತರಗತಿ ಪಾಠ ಆರಂಭಿಸುವ ಕುರಿತೂ ಪ್ರಯತ್ನಗಳು ನಡೆಯುತ್ತಿವೆ’ ಎಂದರು.</p>.<p>’ಈಗಾಗಲೇ ವಿವಿಧ ಕಾಲೇಜುಗಳ ಪ್ರಾಂಶುಪಾಲರ ಸಭೆ ನಡೆಸಲಾಗಿದೆ. ಮುಖ್ಯವಾಗಿ ಕಾಲೇಜಿಗೆ ಬರುವ ಆತ್ಮವಿಶ್ವಾಸ ವಿದ್ಯಾರ್ಥಿಗಳಲ್ಲಿ ಮೂಡಬೇಕು’ ಎಂದ ಅವರು, ಅತಿಥಿ ಉಪನ್ಯಾಸಕರ ನೇಮಕಾತಿ ಪಟ್ಟಿಯನ್ನು ವಾರಾಂತ್ಯದೊಳಗೆ ಬಿಡುಗಡೆ ಮಾಡುವುದಾಗಿ ಹೇಳಿದರು.</p>.<p>‘ವಿಶ್ವವಿದ್ಯಾಲಯ ಕಾಲೇಜಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿಕೊಂಡ ಅವರು, ಅಗತ್ಯ ಸಹಕಾರ ನೀಡುವುದಾಗಿ ಹೇಳಿದರು. ಕಾಲೇಜುಗಳು ತಮಗಿರುವ ಸ್ವಾತಂತ್ರ್ಯವನ್ನು ಬಳಸಿಕೊಂಡು ಅಭಿವೃದ್ಧಿ ಪಥದತ್ತ ಮುನ್ನಡೆಯಬೇಕು. ಕಾಲೇಜಿನ ಸ್ವಚ್ಛತೆ, ಪೀಠೋಪಕರಣಗಳ ನಿರ್ವಹಣೆ, ಪ್ರಥಮ ಚಿಕಿತ್ಸೆಗೆ ಗಮನ ಹರಿಸುವಂತೆಯೂ ಸಲಹೆ ನೀಡಿದರು.</p>.<p>ಕಾಲೇಜಿನ ಪ್ರಾಂಶುಪಾಲ ಡಾ. ಹರೀಶ್ ಎ., ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ವಿಭಾಗದ ಹಿರಿಯ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ’ಮಂಗಳೂರು ವಿಶ್ವವಿದ್ಯಾಲಯವು ಶೀಘ್ರದಲ್ಲೇ ಯುಜಿಸಿ ನಿಯಮಗಳ ಅನ್ವಯ ಪರಿಷ್ಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದೆ’ ಎಂದು ಕುಲಸಚಿವ ಕೆ. ರಾಜು ಮೊಗವೀರ ಹೇಳಿದರು.</p>.<p>ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜಿಗೆ ಭೇಟಿ ನೀಡಿದ ಅವರು, ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಯೊಂದಿಗೆ ಮಾತನಾಡಿದರು.</p>.<p>’ಪರಿಷ್ಕೃತ ವೇಳಾಪಟ್ಟಿಯಿಂದ ವಿದ್ಯಾರ್ಥಿಗಳು, ಪೋಷಕರು, ಪ್ರಾಧ್ಯಾಪಕರು ಆತಂಕ ಪಡಬೇಕಾಗಿಲ್ಲ. ಪದವಿಯ ಎಲ್ಲ ವಿದ್ಯಾರ್ಥಿಗಳಿಗೆ ತರಗತಿ ಪಾಠ ಆರಂಭಿಸುವ ಕುರಿತೂ ಪ್ರಯತ್ನಗಳು ನಡೆಯುತ್ತಿವೆ’ ಎಂದರು.</p>.<p>’ಈಗಾಗಲೇ ವಿವಿಧ ಕಾಲೇಜುಗಳ ಪ್ರಾಂಶುಪಾಲರ ಸಭೆ ನಡೆಸಲಾಗಿದೆ. ಮುಖ್ಯವಾಗಿ ಕಾಲೇಜಿಗೆ ಬರುವ ಆತ್ಮವಿಶ್ವಾಸ ವಿದ್ಯಾರ್ಥಿಗಳಲ್ಲಿ ಮೂಡಬೇಕು’ ಎಂದ ಅವರು, ಅತಿಥಿ ಉಪನ್ಯಾಸಕರ ನೇಮಕಾತಿ ಪಟ್ಟಿಯನ್ನು ವಾರಾಂತ್ಯದೊಳಗೆ ಬಿಡುಗಡೆ ಮಾಡುವುದಾಗಿ ಹೇಳಿದರು.</p>.<p>‘ವಿಶ್ವವಿದ್ಯಾಲಯ ಕಾಲೇಜಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿಕೊಂಡ ಅವರು, ಅಗತ್ಯ ಸಹಕಾರ ನೀಡುವುದಾಗಿ ಹೇಳಿದರು. ಕಾಲೇಜುಗಳು ತಮಗಿರುವ ಸ್ವಾತಂತ್ರ್ಯವನ್ನು ಬಳಸಿಕೊಂಡು ಅಭಿವೃದ್ಧಿ ಪಥದತ್ತ ಮುನ್ನಡೆಯಬೇಕು. ಕಾಲೇಜಿನ ಸ್ವಚ್ಛತೆ, ಪೀಠೋಪಕರಣಗಳ ನಿರ್ವಹಣೆ, ಪ್ರಥಮ ಚಿಕಿತ್ಸೆಗೆ ಗಮನ ಹರಿಸುವಂತೆಯೂ ಸಲಹೆ ನೀಡಿದರು.</p>.<p>ಕಾಲೇಜಿನ ಪ್ರಾಂಶುಪಾಲ ಡಾ. ಹರೀಶ್ ಎ., ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ವಿಭಾಗದ ಹಿರಿಯ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>