<p><strong>ಮಂಗಳೂರು</strong>: ಮಂಗಳೂರು ವಿಶ್ವವಿದ್ಯಾನಿಲಯದ ‘ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ‘ಗೆ ಯಕ್ಷಗಾನ ರಂಗದ ಹಿರಿಯ ಕಲಾವಿದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಅವರು ಆಯ್ಕೆಯಾಗಿದ್ದಾರೆ.</p>.<p>ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಕೃಷ್ಣ ಪ್ರಕಾಶ್ ಉಳಿತ್ತಾಯ ಅವರ 'ಬಲಿಪ ಮಾರ್ಗ’ ಹಾಗೂ ‘ಅಗರಿ ಮಾರ್ಗ' ಕೃತಿಗಳು ಆಯ್ಕೆಯಾಗಿವೆ.</p>.<p>ಯಕ್ಷಮಂಗಳ ಪ್ರಶಸ್ತಿಯು ₹25 ಸಾವಿರ ನಗದು, ಯಕ್ಷಮಂಗಳ ಕೃತಿ ಪ್ರಶಸ್ತಿಯು ₹10 ಸಾವಿರ ನಗದು ಒಳಗೊಂಡಿದೆ. ಮಾರ್ಚ್ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಗಣೇಶ್ ಸಂಜೀವ್, ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇ ಶಕ ಧನಂಜಯ ಕುಂಬ್ಳೆ ತಿಳಿಸಿ ದ್ದಾರೆ.</p>.<p><strong>‘ಕೇಂದ್ರಕ್ಕೆ ₹ 1 ಕೋಟಿ ನೆರವು– ಭರವಸೆ</strong></p><p> ಮಂಗಳೂರು ವಿಶ್ವವಿದ್ಯಾನಿಲಯದ ಡಾ.ದಯಾನಂದ ಪೈ ಸತೀಶ್ ಪೈ ಯಕ್ಷಗಾನ ಕೇಂದ್ರದ ಅಧ್ಯಯನ ಹಾಗೂ ಸಂಶೋಧನೆ ವಿಸ್ತರಿಸಲು ಉದ್ಯಮಿ ಬೆಂಗಳೂರಿನ ದಯಾನಂದ ಪೈ ಅವರು ₹ 1 ಕೋಟಿಯ ವಿಶೇಷ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಯಕ್ಷಮಂಗಳ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಯಾನಂದ ಪೈಗಳು ಭಾಗವಹಿಸಲಿದ್ದು ಆ ದಿನ ಈ ಮೊತ್ತವನ್ನು ಹಸ್ತಾಂತರಿಸುವುದಾಗಿ ತಿಳಿಸಿದ್ದಾರೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್ ಧರ್ಮ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಮಂಗಳೂರು ವಿಶ್ವವಿದ್ಯಾನಿಲಯದ ‘ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ‘ಗೆ ಯಕ್ಷಗಾನ ರಂಗದ ಹಿರಿಯ ಕಲಾವಿದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಅವರು ಆಯ್ಕೆಯಾಗಿದ್ದಾರೆ.</p>.<p>ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಕೃಷ್ಣ ಪ್ರಕಾಶ್ ಉಳಿತ್ತಾಯ ಅವರ 'ಬಲಿಪ ಮಾರ್ಗ’ ಹಾಗೂ ‘ಅಗರಿ ಮಾರ್ಗ' ಕೃತಿಗಳು ಆಯ್ಕೆಯಾಗಿವೆ.</p>.<p>ಯಕ್ಷಮಂಗಳ ಪ್ರಶಸ್ತಿಯು ₹25 ಸಾವಿರ ನಗದು, ಯಕ್ಷಮಂಗಳ ಕೃತಿ ಪ್ರಶಸ್ತಿಯು ₹10 ಸಾವಿರ ನಗದು ಒಳಗೊಂಡಿದೆ. ಮಾರ್ಚ್ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಗಣೇಶ್ ಸಂಜೀವ್, ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇ ಶಕ ಧನಂಜಯ ಕುಂಬ್ಳೆ ತಿಳಿಸಿ ದ್ದಾರೆ.</p>.<p><strong>‘ಕೇಂದ್ರಕ್ಕೆ ₹ 1 ಕೋಟಿ ನೆರವು– ಭರವಸೆ</strong></p><p> ಮಂಗಳೂರು ವಿಶ್ವವಿದ್ಯಾನಿಲಯದ ಡಾ.ದಯಾನಂದ ಪೈ ಸತೀಶ್ ಪೈ ಯಕ್ಷಗಾನ ಕೇಂದ್ರದ ಅಧ್ಯಯನ ಹಾಗೂ ಸಂಶೋಧನೆ ವಿಸ್ತರಿಸಲು ಉದ್ಯಮಿ ಬೆಂಗಳೂರಿನ ದಯಾನಂದ ಪೈ ಅವರು ₹ 1 ಕೋಟಿಯ ವಿಶೇಷ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಯಕ್ಷಮಂಗಳ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಯಾನಂದ ಪೈಗಳು ಭಾಗವಹಿಸಲಿದ್ದು ಆ ದಿನ ಈ ಮೊತ್ತವನ್ನು ಹಸ್ತಾಂತರಿಸುವುದಾಗಿ ತಿಳಿಸಿದ್ದಾರೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್ ಧರ್ಮ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>