<p>ಮಂಗಳೂರು: ನಗರದ ಮೂರು ಪ್ರಮುಖ ಬಸ್ ಮಾರ್ಗಗಳನ್ನು ವಿಸ್ತರಿಸುವಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.</p>.<p>ಈ ಕುರಿತು ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಅವರು, ‘ಮಾರ್ಗ ಸಂಖ್ಯೆ 5 ಅನ್ನು ಮೊರ್ಗನ್ಸ್ ಗೇಟ್ನಿಂದ ಜಪ್ಪಿನಮೊಗರುವಿಗೆ ವಿಸ್ತರಿಸಬೇಕು. ಬೈಕಂಪಾಡಿ ಪರಿಸರದ ಕೈಗಾರಿಕೆಗಳ ಕಾರ್ಮಿಕರು ಮತ್ತು ನಿತ್ಯ ಪ್ರಯಾಣಿಕರ ಹಿತದೃಷ್ಟಿಯಿಂದ ಮಾರ್ಗ ಸಂಖ್ಯೆ 7 ಅನ್ನು ಉರ್ವ ಸ್ಟೋರ್ನಿಂದ ಬೈಕಂಪಾಡಿ ಕೈಗಾರಿಕಾ ಪ್ರದೇಶದವರೆಗೆ ವಿಸ್ತರಿಸಬೇಕು. ದೇಶ-ವಿದೇಶಗಳ ಪ್ರವಾಸಿಗರಿಗೆ ಮತ್ತು ಸ್ಥಳೀಯ ಸಂದರ್ಶಕರಿಗೆ ನೇರ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಮಾರ್ಗ ಸಂಖ್ಯೆ 13 ಅನ್ನು ಪಣಂಬೂರು ಕಿನಾರೆಯ ಒಳಭಾಗದವರೆಗೆ ವಿಸ್ತರಿಸಬೇಕು’ ಎಂದು ತಿಳಿಸಿದ್ದಾರೆ.</p>.<p>‘ನಗರವು ವೇಗವಾಗಿ ಬೆಳೆಯುತ್ತಿದ್ದು, ಹಲವು ಸಿಟಿ ಬಸ್ಗಳು ಈಗಲೂ ಹಳೆಯ ಮತ್ತು ಸಣ್ಣ ಮಾರ್ಗಗಳಲ್ಲೇ ಸಂಚರಿಸುತ್ತಿವೆ. ಇದರಿಂದ ಹೆಚ್ಚುತ್ತಿರುವ ಸಾರಿಗೆ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಬಸ್ ಆಪರೇಟರ್ಗಳಿಗೂ ನಷ್ಟ ಉಂಟಾಗುತ್ತಿದೆ. ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಈ ಮಾರ್ಗಗಳನ್ನು ವಿಸ್ತರಿಸಬೇಕಿದೆ. ಈ ಮೂರು ಮಾರ್ಗಗಳ ವಿಸ್ತರಣೆಯಿಂದ ದೈನಂದಿನ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗಿಗಳಿಗೆ ಅನುಕೂಲವಾಗುತ್ತದೆ. ಕರಾವಳಿಯ ಪ್ರಮುಖ ಪ್ರವಾಸಿ ತಾಣಗಳಿಗೆ ನೇರ ಸಂಪರ್ಕ ಲಭಿಸುತ್ತದೆ. ಪ್ರವಾಸೋದ್ಯಮದ ಬೆಳವಣಿಗೆಗೂ ಉತ್ತೇಜನ ಸಿಗಲಿದೆ’ ಎಂದು ಅವರು ಸಲಹೆ ನೀಡಿದ್ದಾರೆ.</p>.<p>ಸಂಸದರು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ತುರ್ತಾಗಿ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕಚೇರಿಯಿಂದ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-29-1383829887</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ನಗರದ ಮೂರು ಪ್ರಮುಖ ಬಸ್ ಮಾರ್ಗಗಳನ್ನು ವಿಸ್ತರಿಸುವಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.</p>.<p>ಈ ಕುರಿತು ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಅವರು, ‘ಮಾರ್ಗ ಸಂಖ್ಯೆ 5 ಅನ್ನು ಮೊರ್ಗನ್ಸ್ ಗೇಟ್ನಿಂದ ಜಪ್ಪಿನಮೊಗರುವಿಗೆ ವಿಸ್ತರಿಸಬೇಕು. ಬೈಕಂಪಾಡಿ ಪರಿಸರದ ಕೈಗಾರಿಕೆಗಳ ಕಾರ್ಮಿಕರು ಮತ್ತು ನಿತ್ಯ ಪ್ರಯಾಣಿಕರ ಹಿತದೃಷ್ಟಿಯಿಂದ ಮಾರ್ಗ ಸಂಖ್ಯೆ 7 ಅನ್ನು ಉರ್ವ ಸ್ಟೋರ್ನಿಂದ ಬೈಕಂಪಾಡಿ ಕೈಗಾರಿಕಾ ಪ್ರದೇಶದವರೆಗೆ ವಿಸ್ತರಿಸಬೇಕು. ದೇಶ-ವಿದೇಶಗಳ ಪ್ರವಾಸಿಗರಿಗೆ ಮತ್ತು ಸ್ಥಳೀಯ ಸಂದರ್ಶಕರಿಗೆ ನೇರ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಮಾರ್ಗ ಸಂಖ್ಯೆ 13 ಅನ್ನು ಪಣಂಬೂರು ಕಿನಾರೆಯ ಒಳಭಾಗದವರೆಗೆ ವಿಸ್ತರಿಸಬೇಕು’ ಎಂದು ತಿಳಿಸಿದ್ದಾರೆ.</p>.<p>‘ನಗರವು ವೇಗವಾಗಿ ಬೆಳೆಯುತ್ತಿದ್ದು, ಹಲವು ಸಿಟಿ ಬಸ್ಗಳು ಈಗಲೂ ಹಳೆಯ ಮತ್ತು ಸಣ್ಣ ಮಾರ್ಗಗಳಲ್ಲೇ ಸಂಚರಿಸುತ್ತಿವೆ. ಇದರಿಂದ ಹೆಚ್ಚುತ್ತಿರುವ ಸಾರಿಗೆ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಬಸ್ ಆಪರೇಟರ್ಗಳಿಗೂ ನಷ್ಟ ಉಂಟಾಗುತ್ತಿದೆ. ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಈ ಮಾರ್ಗಗಳನ್ನು ವಿಸ್ತರಿಸಬೇಕಿದೆ. ಈ ಮೂರು ಮಾರ್ಗಗಳ ವಿಸ್ತರಣೆಯಿಂದ ದೈನಂದಿನ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗಿಗಳಿಗೆ ಅನುಕೂಲವಾಗುತ್ತದೆ. ಕರಾವಳಿಯ ಪ್ರಮುಖ ಪ್ರವಾಸಿ ತಾಣಗಳಿಗೆ ನೇರ ಸಂಪರ್ಕ ಲಭಿಸುತ್ತದೆ. ಪ್ರವಾಸೋದ್ಯಮದ ಬೆಳವಣಿಗೆಗೂ ಉತ್ತೇಜನ ಸಿಗಲಿದೆ’ ಎಂದು ಅವರು ಸಲಹೆ ನೀಡಿದ್ದಾರೆ.</p>.<p>ಸಂಸದರು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ತುರ್ತಾಗಿ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕಚೇರಿಯಿಂದ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-29-1383829887</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>