ಗುರುವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರೆದಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಬಾಕಿ ಉಳಿಸಿಕೊಂಡ ಗ್ರಾಮ ಪಂಚಾಯಿತಿಗಳು ಶೀಘ್ರ ಈ ಕೆಲಸ ಪೂರ್ಣಗೊಳಿಸಬೇಕು. ಒಂದು ತಿಂಗಳ ಒಳಗಾಗಿ ಈ ಸಂಬಂಧ ಸರ್ವೆ, ಜಾಗ ಗುರುತಿಸುವಿಕೆ, ಘಟಕ ನಿರ್ಮಾಣದಲ್ಲಿ ಪ್ರಗತಿ ಆಗಬೇಕು. ಒಂದೊಮ್ಮೆ ಜಾಗದ ಸಮಸ್ಯೆ ಇರುವ ಪಂಚಾಯಿತಿಗಳು ನೆರೆಯ ಗ್ರಾಮ ಪಂಚಾಯಿತಿ ಜೊತೆ ಹೊಂದಾಣಿಕೆಯ ಒಪ್ಪಂದ ಮಾಡಿಕೊಳ್ಳಬೇಕು. ಪಿಡಿಒಗಳು ಸಬೂಬು ಹೇಳಿ, ನಿರ್ಲಕ್ಷ್ಯ ತೋರಿದರೆ, ನೋಟಿಸ್ ಜಾರಿಗೊಳಿಸಲಾಗುತ್ತದೆ’ ಎಂದರು.