ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜುಲೈ 30ರಂದು ಎಂಆರ್ಪಿಎಲ್ ನಲ್ಲಿ ಯುವಕನೊಬ್ಬನ ಮೇಲೆ ದಾಳಿ ನಡೆದಿತ್ತು ಎಂಬ ಸುದ್ದಿ ಹರಡಿತ್ತು. ಬುಧವಾರ ಬೆಳಿಗ್ಗೆ ಉಳ್ಳಾಲದಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಚ್ಚು, ಲಾಂಗು ಬಳಸಿ ಹಲ್ಲೆ ಮಾಡಲಾಗಿದೆ ಎಂಬ ಸುದ್ದಿ ಹರಿದಾಡಿತು. ಎರಡೂ ಸ್ಥಳಗಳಿಗೆ ಭೇಟಿ ನೀಡಿದ್ದು, ಎರಡೂ ಕೂಡ ಸುಳ್ಳು ಸುದ್ದಿ. ಉಳ್ಳಾಲ ವ್ಯಕ್ತಿಯನ್ನು ಕರೆಯಿಸಿ ಪರಿಶೀಲನೆ ಮಾಡಲಾಗುತ್ತಿದೆ. ಆತಂಕದಿಂದ ತಾನು ಹಾಗೆ ಹೇಳಿರುವುದಾಗಿ ಆ ವ್ಯಕ್ತಿ ಹೇಳಿಕೆ ನೀಡಿದ್ದಾನೆ. ಸ್ಥಳೀಯರೊಂದಿಗೂ ಚರ್ಚಿಸಲಾಗಿದೆ‘ ಎಂದರು.