<p><strong>ಮಂಗಳೂರು:</strong> ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನೆಗಳ ವಿಭಾಗದ ಜಂಟಿ ನಿರ್ದೇಶಕ ಕೆ.ವಿ. ಜಯರಾಮ್ ಅವರ ಬಿಜೈ ಬಳಿ ಇರುವ ಮನೆ ಮೇಲೆ ಮಂಗಳವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರಿದಿದೆ.</p>.<p>ಇದರ ಜೊತೆ ಅವರ ಕಚೇರಿ, ನಗರದ ಪಡೀಲ್ ಬಳಿಯ ಜಯರಾಮ್ ತಂದೆಯ ಮನೆ, ಕೇರಳದಲ್ಲಿರುವ ಜಯರಾಮ್ ಪತ್ನಿಯ ಮನೆ, ಮೇಲೂ ದಾಳಿ ನಡೆಸಿದ್ದು, ಪರಿಶೀಲಿಸಲಾಗುತ್ತಿದೆ.</p>.<p>ಇದನ್ನೂ ಓದಿ.. <a href="https://www.prajavani.net/karnataka-news/seven-officials-housea-raided-by-acb-across-karnataka-801684.html"><strong>ರಾಜ್ಯದಲ್ಲಿ ಏಳು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ</strong></a><br /></p>.<p>ಕಾರ್ಯಾಚರಣೆಯಲ್ಲಿ ಎಸಿಬಿ ಎಸ್ಪಿ ಬೋಪಯ್ಯ, ಡಿವೈಎಸ್ಪಿ ಕೆ.ಸಿ.ಪ್ರಕಾಶ್ ಇನ್ಸ್ಪೆಕ್ಟರ್ ಗಳಾದ ಶ್ಯಾಂಸುಂದರ್, ಗುರುರಾಜ್ ಹಾಗೂ ಸಿಬ್ಬಂದಿ ಇದ್ದಾರೆ.</p>.<p>ಕೆಲಸವೊಂದನ್ನು ಮಾಡಿಕೊಡಲು ಲಂಚ ಬೇಡಿಕೆ ಇಟ್ಟ ಆರೋಪದಲ್ಲಿ ಜಯರಾಮ್ ವಿರುದ್ಧ ಸಂತ್ರಸ್ತರೊಬ್ಬರು ಎಸಿಬಿಯಲ್ಲಿ ಈ ಹಿಂದೆ ದೂರು ದಾಖಲಿಸಿದ್ದರು. ಆದರೆ, ಈ ಪ್ರಕರಣದ ಬೆನ್ನು ಬಿದ್ದಿದ್ದ ಎಸಿಬಿ ಅಧಿಕಾರಿಗಳಿಗೆ ಇನ್ನೂ ಹೆಚ್ಚಿನ ಮಾಹಿತಿ ಸಿಕ್ಕಿತ್ತು. ಹೀಗಾಗಿ ಟ್ರ್ಯಾಪ್ ಮಾಡುವ ಬದಲು ದಾಳಿಗೆ ಆಯೋಜಿಸಿದ್ದರು.</p>.<p>ದಾಳಿ ವೇಳೆ ಮಹತ್ವದ ದಾಖಲೆಗಳು ದೊರೆತಿವೆ ಎಂದು ಮೂಲಗಳು ತಿಳಿಸಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನೆಗಳ ವಿಭಾಗದ ಜಂಟಿ ನಿರ್ದೇಶಕ ಕೆ.ವಿ. ಜಯರಾಮ್ ಅವರ ಬಿಜೈ ಬಳಿ ಇರುವ ಮನೆ ಮೇಲೆ ಮಂಗಳವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರಿದಿದೆ.</p>.<p>ಇದರ ಜೊತೆ ಅವರ ಕಚೇರಿ, ನಗರದ ಪಡೀಲ್ ಬಳಿಯ ಜಯರಾಮ್ ತಂದೆಯ ಮನೆ, ಕೇರಳದಲ್ಲಿರುವ ಜಯರಾಮ್ ಪತ್ನಿಯ ಮನೆ, ಮೇಲೂ ದಾಳಿ ನಡೆಸಿದ್ದು, ಪರಿಶೀಲಿಸಲಾಗುತ್ತಿದೆ.</p>.<p>ಇದನ್ನೂ ಓದಿ.. <a href="https://www.prajavani.net/karnataka-news/seven-officials-housea-raided-by-acb-across-karnataka-801684.html"><strong>ರಾಜ್ಯದಲ್ಲಿ ಏಳು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ</strong></a><br /></p>.<p>ಕಾರ್ಯಾಚರಣೆಯಲ್ಲಿ ಎಸಿಬಿ ಎಸ್ಪಿ ಬೋಪಯ್ಯ, ಡಿವೈಎಸ್ಪಿ ಕೆ.ಸಿ.ಪ್ರಕಾಶ್ ಇನ್ಸ್ಪೆಕ್ಟರ್ ಗಳಾದ ಶ್ಯಾಂಸುಂದರ್, ಗುರುರಾಜ್ ಹಾಗೂ ಸಿಬ್ಬಂದಿ ಇದ್ದಾರೆ.</p>.<p>ಕೆಲಸವೊಂದನ್ನು ಮಾಡಿಕೊಡಲು ಲಂಚ ಬೇಡಿಕೆ ಇಟ್ಟ ಆರೋಪದಲ್ಲಿ ಜಯರಾಮ್ ವಿರುದ್ಧ ಸಂತ್ರಸ್ತರೊಬ್ಬರು ಎಸಿಬಿಯಲ್ಲಿ ಈ ಹಿಂದೆ ದೂರು ದಾಖಲಿಸಿದ್ದರು. ಆದರೆ, ಈ ಪ್ರಕರಣದ ಬೆನ್ನು ಬಿದ್ದಿದ್ದ ಎಸಿಬಿ ಅಧಿಕಾರಿಗಳಿಗೆ ಇನ್ನೂ ಹೆಚ್ಚಿನ ಮಾಹಿತಿ ಸಿಕ್ಕಿತ್ತು. ಹೀಗಾಗಿ ಟ್ರ್ಯಾಪ್ ಮಾಡುವ ಬದಲು ದಾಳಿಗೆ ಆಯೋಜಿಸಿದ್ದರು.</p>.<p>ದಾಳಿ ವೇಳೆ ಮಹತ್ವದ ದಾಖಲೆಗಳು ದೊರೆತಿವೆ ಎಂದು ಮೂಲಗಳು ತಿಳಿಸಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>