ಮಹಾನಗರಪಾಲಿಕೆ ವ್ಯಾಪ್ತಿಯ ಪ್ರಮುಖ ಪ್ರದೇಶಗಳಲ್ಲಿ, ಜಂಕ್ಷನ್, ಸಾರ್ವಜನಿಕ ಸ್ಥಳ, ರಸ್ತೆ ಬದಿ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಒತ್ತುವರಿ ಮಾಡಿಕೊಂಡು ಹಲವಾರು ಅನಧಿಕೃತ ಗೂಡಂಗಡಿ, ತಿಂಡಿ ತಿನಿಸು ವ್ಯಾಪಾರ, ತರಕಾರಿ, ಹೂವಿನ ಮತ್ತು ಇನ್ನಿತರ ಅನಧಿಕೃತ ಬೀದಿಬದಿ ವ್ಯಾಪಾರಗಳನ್ನು ನಡೆಸುತ್ತಿರುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ಹಾಗೂ ಪಾದಚಾರಿಗಳ ನಿರಾತಂಕ ಓಡಾಟಕ್ಕೆ ಅಡಚಣೆ ಆಗುತ್ತಿರುವ ಬಗ್ಗೆ ಸಾರ್ವಜನಿಕ ದೂರುಗಳು ಬಂದಿದ್ದವು.