ರಾಮ್ಪ್ರಸಾದ್ ತಾನು ಕೆಎಂಎಫ್ ನಿರ್ದೇಶಕ ಎಂದು ಹೇಳಿಕೊಂಡು, ಇದರ ವಿವಿಧ ವಿಭಾಗಗಳಲ್ಲಿ ಕೆಲಸ ಕೊಡಿಸುವುದಾಗಿ ಹೇಳಿದ್ದಾನೆ. ಅಲ್ಲದೆ ಕೆಎಂಎಫ್ ಹೆಸರಿನಲ್ಲಿ ಬೆಂಗಳೂರಿನಿಂದ ತರಬೇತುದಾರರನ್ನು ಕರೆಸಿ ಪುತ್ತೂರು ಮತ್ತು ಮಂಗಳೂರಿನ ಉರ್ವದಲ್ಲಿ 15 ದಿನಗಳ ತರಬೇತಿಯನ್ನು ಕೊಡಿಸಿದ್ದಾನೆ. ಕೆಲವರಿಗೆ ನೇಮಕಾತಿ ಆದೇಶ ಪ್ರತಿಯನ್ನೂ ತೋರಿಸಿದ್ದು, ಪ್ರತಿಯೊಬ್ಬರಿಂದ ₹ 50ಸಾವಿರದಿಂದ ₹ 3.50 ಲಕ್ಷದವರೆಗೆ, ಗೂಗಲ್ ಪೇ, ಬ್ಯಾಂಕ್ ಖಾತೆ ವರ್ಗಾವಣೆ, ನಗದು ಹೀಗೆ ವಿವಿಧ ರೂಪದಲ್ಲಿ ಪಡೆದಿದ್ದಾನೆ ಎನ್ನಲಾಗಿದೆ.