<p>ಮಂಗಳೂರು: ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘದ (ದ.ಕ. ಮತ್ತು ಉಡುಪಿ ಜಿಲ್ಲೆ) ಮಾಸಿಕ ಸಭೆ ಈಚೆಗೆ ನಗರದ ಕಡೆಮುಗರುನಲ್ಲಿರುವ ಸಂಘದ ಸಭಾಭವನದಲ್ಲಿ ನಡೆಯಿತು.</p>.<p>ಸಂಘದ ಚೇರ್ಮನ್ ಜನಾರ್ದನ ಅತ್ತಾವರ ಮಾತನಾಡಿ, ‘ಮೇ 3ರಂದು ಸಂಘ ಮತ್ತು ನಗರದ ಎಂ.ಜಿ. ಕ್ಲಬ್ ಸಹಯೋಗದಲ್ಲಿ ಎಕ್ಕೂರಿನ ಫಿಷರಿಸ್ ಮೈದಾನದಲ್ಲಿ ವೃತ್ತಿ ಬಾಂಧವರಿಗಾಗಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ಸಂಘದ ಬಂಟ್ವಾಳ ವಲಯದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು. ಸುಳ್ಯ ವಲಯದಲ್ಲಿ ಬೆಂಕಿ ಅವಘಡಕ್ಕೆ ಈಡಾದ ಎರಡು ಗ್ಯಾರೇಜುಗಳ ಮಾಲಕರಿಗೆ ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದ ಕಡಬ ವಲಯದ ಸದಸ್ಯರೋಬ್ಬರಿಗೆ ಸಂಘದ ವತಿಯಿಂದ ಆರ್ಥಿಕ ನೆರವು ನೀಡಲಾಯಿತು.</p>.<p>ಸಂಘದ ಅಧ್ಯಕ್ಷ ದಿನಕರ ಕುಲಾಲ್, ನಿರ್ದೇಶಕ ಪುಂಡಲೀಕ ಸುವರ್ಣ, ಉಪಾಧ್ಯಕ್ಷ ಅಬ್ದುಲ್ ಮೊಯ್ದಿನ್ ಕಾರ್ಕಳ ಮತ್ತು ಕೋಶಾಧಿಕಾರಿ ಕಿರಣ್ ರಾಜ್ ವೇದಿಕೆಯಲ್ಲಿದ್ದರು.</p>.<p>ಕ್ರೀಡಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಅವರು ಕ್ರೀಡಾಕೂಟದ ಮಾಹಿತಿ ನೀಡಿದರು.</p>.<p>ಪ್ರಧಾನ ಕಾರ್ಯದರ್ಶಿ ರಾಜ ಗೋಪಾಲ್ ನಿರೂಪಿಸಿದರು. ಸಲಹೆಗಾರ ಕೃಷ್ಣ ಶ್ರೀಯಾನ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-29-1035683634</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘದ (ದ.ಕ. ಮತ್ತು ಉಡುಪಿ ಜಿಲ್ಲೆ) ಮಾಸಿಕ ಸಭೆ ಈಚೆಗೆ ನಗರದ ಕಡೆಮುಗರುನಲ್ಲಿರುವ ಸಂಘದ ಸಭಾಭವನದಲ್ಲಿ ನಡೆಯಿತು.</p>.<p>ಸಂಘದ ಚೇರ್ಮನ್ ಜನಾರ್ದನ ಅತ್ತಾವರ ಮಾತನಾಡಿ, ‘ಮೇ 3ರಂದು ಸಂಘ ಮತ್ತು ನಗರದ ಎಂ.ಜಿ. ಕ್ಲಬ್ ಸಹಯೋಗದಲ್ಲಿ ಎಕ್ಕೂರಿನ ಫಿಷರಿಸ್ ಮೈದಾನದಲ್ಲಿ ವೃತ್ತಿ ಬಾಂಧವರಿಗಾಗಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ಸಂಘದ ಬಂಟ್ವಾಳ ವಲಯದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು. ಸುಳ್ಯ ವಲಯದಲ್ಲಿ ಬೆಂಕಿ ಅವಘಡಕ್ಕೆ ಈಡಾದ ಎರಡು ಗ್ಯಾರೇಜುಗಳ ಮಾಲಕರಿಗೆ ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದ ಕಡಬ ವಲಯದ ಸದಸ್ಯರೋಬ್ಬರಿಗೆ ಸಂಘದ ವತಿಯಿಂದ ಆರ್ಥಿಕ ನೆರವು ನೀಡಲಾಯಿತು.</p>.<p>ಸಂಘದ ಅಧ್ಯಕ್ಷ ದಿನಕರ ಕುಲಾಲ್, ನಿರ್ದೇಶಕ ಪುಂಡಲೀಕ ಸುವರ್ಣ, ಉಪಾಧ್ಯಕ್ಷ ಅಬ್ದುಲ್ ಮೊಯ್ದಿನ್ ಕಾರ್ಕಳ ಮತ್ತು ಕೋಶಾಧಿಕಾರಿ ಕಿರಣ್ ರಾಜ್ ವೇದಿಕೆಯಲ್ಲಿದ್ದರು.</p>.<p>ಕ್ರೀಡಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಅವರು ಕ್ರೀಡಾಕೂಟದ ಮಾಹಿತಿ ನೀಡಿದರು.</p>.<p>ಪ್ರಧಾನ ಕಾರ್ಯದರ್ಶಿ ರಾಜ ಗೋಪಾಲ್ ನಿರೂಪಿಸಿದರು. ಸಲಹೆಗಾರ ಕೃಷ್ಣ ಶ್ರೀಯಾನ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-29-1035683634</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>