ಮಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರಿಗೆ ಗುರುವಾರ ಬೆಳಿಗ್ಗೆ ನಗರದಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮಳೆ ಕ್ಷೀಣ: ಕವಿದ ಮೋಡ
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಕಳೆದ ಎರಡು ದಿನಗಳಲ್ಲಿ ಮಳೆಯ ಅಬ್ಬರ ಇಳಿಮುಖವಾಗಿದ್ದು, ಗುರುವಾರ ಬೆಳಿಗ್ಗೆ ತನಕ (ಕಳೆದ 24 ಗಂಟೆಗಳ)ಲ್ಲಿ 0.8 ಸೆಂ.ಮೀ. ಮಳೆ ದಾಖಲಾಗಿದೆ. ಆದರೆ, ಗುರುವಾರವೂ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಆಗಾಗ್ಗ ಅಲ್ಲಲ್ಲಿ ಚದುರಿದ ತುಂತುರು ಮಳೆ ಸುರಿಯುತ್ತಿದೆ.