‘ಮಂಗಳೂರು ದಸರಾ ಸಂದರ್ಭದಲ್ಲಿ ಪೂಜೆ, ಪುರಸ್ಕಾರ, ಪ್ರಸಾದ ವಿತರಣೆ, ಮಕ್ಕಳು, ಹಿರಿಯರ ಸುರಕ್ಷತೆ ಸೇರಿದಂತೆ ಪ್ರತಿಯೊಂದು ವಿಚಾರ ಗಮನದಲ್ಲಿಟ್ಟು ಕ್ಷೇತ್ರದ ಆಡಳಿತ ಮಂಡಳಿ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಮಂಗಳೂರು ದಸರಾ ನಮ್ಮೆಲ್ಲರ ಉತ್ಸವ, ಪ್ರತಿಯೊಬ್ಬರು ನಮ್ಮ ಸುರಕ್ಷತೆಗೆ ಒತ್ತು ನೀಡುವುದರ ಜೊತೆಗೆ ಉತ್ಸವ ಯಶಸ್ವಿಯಾಗಿ ನಡೆಸೋಣ’ ಎಂದು ಮನವಿ ಮಾಡಿದರು.