ಮಂಗಳೂರು ಬಸ್ ನಿಲ್ದಾಣದಿಂದ ಬೆಳಿಗ್ಗೆ 8ರಿಂದ 9ಗಂಟೆ ನಡುವೆ ಹೊರಡುವ ಮೂರು ಬಸ್ ಗಳು ಮಂಗಳದೇವಿ ದೇವಸ್ಥಾನ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನ, ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಸಸಿಹಿತ್ಲು ಭಗವತಿ ದೇವಸ್ಥಾನ ಹಾಗೂ ಕಡಲ ಕಿನಾರೆ, ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನ, ಉರ್ವ ಮಾರಿಯಮ್ಮ ದೇವಸ್ಥಾನ ಹಾಗೂ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಗಳಿಗೆ ಪ್ರವಾಸಿಗರನ್ನು ಕರೆದೊಯ್ಯಲಿವೆ. ಪ್ರವಾಸಿಗರಿಗೆ ನವದುರ್ಗೆಯರ ದರ್ಶನ ಮಾಡಿಸಿ ನಗರದ ಬಸ್ ನಿಲ್ದಾಣಕ್ಕೆ ಮರಳಲಿವೆ.