ಮಂಗಳೂರು ದಸರಾ ಉತ್ಸವದಲ್ಲಿ ಧಾರ್ಮಿಕ ನಂಬಿಕೆಯ ಜೊತೆಗೆ ಕರಾವಳಿಯ ಆರ್ಥಿಕ ಪುನಶ್ಚೇತನ ಅಡಗಿದೆ. ದಸರಾ ಸಂದರ್ಭ ಕೋವಿಡ್–19 ನಿಂದ ದೇಶ ಮುಕ್ತಗೊಳ್ಳುವ ನಿಟ್ಟಿನಲ್ಲಿ ವಿಶೇಷ ಪ್ರಾರ್ಥನೆಯೂ ನಡೆಯಲಿದೆ. ಯಾವುದೇ ಕಾರಣಕ್ಕೂ ಮಂಗಳೂರು ದಸರಾ ನಿಲ್ಲಿಸಬಾರದು. ಎಂದಿನಂತೆ ವೈಭವದಿಂದ ನಡೆಸಬೇಕು ಎಂದು ನಿರ್ಧರಿಸಲಾಗಿದೆ. ಇದು ಭಕ್ತರು, ಉದ್ಯಮಿಗಳು, ವ್ಯಾಪಾರಿಗಳು, ಹಿತೈಷಿಗಳ ವಲಯಗಳ ಅಭಿಪ್ರಾಯವೂ ಆಗಿದೆ.