‘ನಾವು ಹೊಸ ಸಾಕ್ಷ್ಯಗಳನ್ನು ಎಸ್ಎಚ್ಆರ್ಸಿಗೆ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದೆವು. ಆದರೆ, ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ವಿವಿಧ ರಾಜ್ಯಗಳಲ್ಲಿ ನಡೆದಿರುವ ಗೋಲಿಬಾರ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಯಾ ರಾಜ್ಯಗಳ ಮಾನವ ಹಕ್ಕುಗಳ ಆಯೋಗದಲ್ಲಿ ವಿಚಾರಣೆ ನಡೆಸದಂತೆ ಎನ್ಎಚ್ಆರ್ಸಿ ನಿರ್ದೇಶನ ನೀಡಿದೆ. ಈ ಸಂಬಂಧ ಪತ್ರ ಬಂದಿರುವುದನ್ನು ತಿಳಿಸಿದ ಆಯೋಗದ ಅಧ್ಯಕ್ಷರು, ವಿಚಾರಣೆಯನ್ನು ಸ್ಥಗಿತಗೊಳಿಸಿದರು. ಪ್ರಕರಣದ ಕಡತವನ್ನು ಎನ್ಎಚ್ಆರ್ಸಿಗೆ ವರ್ಗಾಯಿಸಲಾಗುವುದು ಎಂಬುದನ್ನು ಪ್ರಕಟಿಸಿದರು’ ಎಂದು ಅರ್ಜಿದಾರರಾಗಿರುವ ರಕ್ಷಿತ್ ಶಿವರಾಂ ‘ಪ್ರಜಾವಾಣಿ’ಗೆ ತಿಳಿಸಿದರು.