<p>ಮಂಗಳೂರು: ಗಾಂಜಾ ಸಾಗಾಟ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದ್ದ ವ್ಯಕ್ತಿ ಮೇಲಿನ ಆರೋಪವು ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತಗತಿ ನ್ಯಾಯಾಲಯ–1ರಲ್ಲಿ ಸಾಬೀತಾಗಿದೆ. ಅಪರಾಧಿಗೆ ನ್ಯಾಯಾಲಯವು ಆರು ತಿಂಗಳು ಕಠಿಣ ಜೈಲು ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿದೆ.</p>.<p>ಸಲಾವುದ್ದೀನ್ ಶಿಕ್ಷೆಗೆ ಒಳಗಾದ ವ್ಯಕ್ತಿ. ನಗರದ ಕಸಬಾ ಗ್ರಾಮದ ಹಳೆ ಬಂದರು ಉಪ್ಪಿನ ದಕ್ಕೆಯಲ್ಲಿ ಕರಾವಳಿ ಕಾವಲು ಠಾಣೆಯ ಪೊಲೀಸರು 2020ರ ಜ.30ರಂದು ಹಡಗಿನ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಿದ್ದರು. ಈ ವೇಳೆ ಸಲಾವುದ್ದೀನ್ ಬಳಿ ಇದ್ದ ಚೀಲದಲ್ಲಿ 100 ಗ್ರಾಮ್ ಗಾಂಜಾ ಪತ್ತೆಯಾಗಿತ್ತು. ಆ ಗಾಂಜಾವನ್ನು ವಶಕ್ಕೆ ಪಡೆದ ಪೊಲೀಸರು ಆತನನ್ನು ಬಂಧಿಸಿದ್ದರು.</p>.<p>ಕರಾವಳಿ ಕಾವಲು ಠಾಣೆಯ ಪೊಲೀಸರು ಸಲಾವುದ್ದೀನ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ 3ನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿಯನ್ನು ಬಿಡುಗಡೆಗೊಳಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಮೇಲ್ಮನವಿ ಸಲ್ಲಿಸಿತ್ತು. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ತ್ವರಿತಗತಿ) ನ್ಯಾಯಾಲಯ–1 ಮೇಲ್ಮನವಿಯನ್ನು ಪರಿಗಣಿಸಿ ಪ್ರಕರಣದ ವಿಚಾರಣೆ ನಡೆಸಿತ್ತು.</p>.<p>ಸಲಾವುದ್ದೀನ್ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿರುವ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತಗತಿ ನ್ಯಾಯಾಲಯ–1ರ ನ್ಯಾಯಾಧೀಶರಾದ ಮೋಹನ ಜೆ.ಎಸ್. ಅವರು ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿ ಗುರುವಾರ ಆದೇಶ ಮಾಡಿದ್ದಾರೆ. ಆತನಿಗೆ ಎನ್.ಡಿ.ಪಿ.ಎಸ್ ಕಾಯ್ದೆಯ ಸೆಕ್ಷನ್ 8 (ಸಿ) ಮತ್ತು 20(ಬಿ) (ii) (ಎ) ಪ್ರಕಾರ 6 ತಿಂಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹ 5 ಸಾವಿರ ದಂಡವನ್ನು ವಿಧಿಸಿದ್ದಾರೆ ಎಂದು ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸಿದ್ದ ಸರ್ಕಾರಿ ವಕೀಲ ಕೆ.ಬದರಿನಾಥ ನಾಯರಿ ಮಾಹಿತಿ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-29-915329565</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಗಾಂಜಾ ಸಾಗಾಟ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದ್ದ ವ್ಯಕ್ತಿ ಮೇಲಿನ ಆರೋಪವು ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತಗತಿ ನ್ಯಾಯಾಲಯ–1ರಲ್ಲಿ ಸಾಬೀತಾಗಿದೆ. ಅಪರಾಧಿಗೆ ನ್ಯಾಯಾಲಯವು ಆರು ತಿಂಗಳು ಕಠಿಣ ಜೈಲು ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿದೆ.</p>.<p>ಸಲಾವುದ್ದೀನ್ ಶಿಕ್ಷೆಗೆ ಒಳಗಾದ ವ್ಯಕ್ತಿ. ನಗರದ ಕಸಬಾ ಗ್ರಾಮದ ಹಳೆ ಬಂದರು ಉಪ್ಪಿನ ದಕ್ಕೆಯಲ್ಲಿ ಕರಾವಳಿ ಕಾವಲು ಠಾಣೆಯ ಪೊಲೀಸರು 2020ರ ಜ.30ರಂದು ಹಡಗಿನ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಿದ್ದರು. ಈ ವೇಳೆ ಸಲಾವುದ್ದೀನ್ ಬಳಿ ಇದ್ದ ಚೀಲದಲ್ಲಿ 100 ಗ್ರಾಮ್ ಗಾಂಜಾ ಪತ್ತೆಯಾಗಿತ್ತು. ಆ ಗಾಂಜಾವನ್ನು ವಶಕ್ಕೆ ಪಡೆದ ಪೊಲೀಸರು ಆತನನ್ನು ಬಂಧಿಸಿದ್ದರು.</p>.<p>ಕರಾವಳಿ ಕಾವಲು ಠಾಣೆಯ ಪೊಲೀಸರು ಸಲಾವುದ್ದೀನ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ 3ನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿಯನ್ನು ಬಿಡುಗಡೆಗೊಳಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಮೇಲ್ಮನವಿ ಸಲ್ಲಿಸಿತ್ತು. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ತ್ವರಿತಗತಿ) ನ್ಯಾಯಾಲಯ–1 ಮೇಲ್ಮನವಿಯನ್ನು ಪರಿಗಣಿಸಿ ಪ್ರಕರಣದ ವಿಚಾರಣೆ ನಡೆಸಿತ್ತು.</p>.<p>ಸಲಾವುದ್ದೀನ್ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿರುವ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತಗತಿ ನ್ಯಾಯಾಲಯ–1ರ ನ್ಯಾಯಾಧೀಶರಾದ ಮೋಹನ ಜೆ.ಎಸ್. ಅವರು ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿ ಗುರುವಾರ ಆದೇಶ ಮಾಡಿದ್ದಾರೆ. ಆತನಿಗೆ ಎನ್.ಡಿ.ಪಿ.ಎಸ್ ಕಾಯ್ದೆಯ ಸೆಕ್ಷನ್ 8 (ಸಿ) ಮತ್ತು 20(ಬಿ) (ii) (ಎ) ಪ್ರಕಾರ 6 ತಿಂಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹ 5 ಸಾವಿರ ದಂಡವನ್ನು ವಿಧಿಸಿದ್ದಾರೆ ಎಂದು ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸಿದ್ದ ಸರ್ಕಾರಿ ವಕೀಲ ಕೆ.ಬದರಿನಾಥ ನಾಯರಿ ಮಾಹಿತಿ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-29-915329565</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>