<p><strong>ಮಂಗಳೂರು:</strong> ಇಲ್ಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಗುರುವಾರ ಮತ್ತೆ ಹೊಡೆದಾಟ ನಡೆದಿದ್ದು, ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. </p>.<p>ಕೈದಿ ಮುಕ್ತಿಯರ್ ಎಂಬಾತ ಸಹ ಕೈದಿ ಕೇಶವ ಎಂಬಾತನ ಮೇಲೆ ಗುರುವಾರ ಮಧ್ಯಾಹ್ನ ಹಲ್ಲೆ ನಡೆಸಿದ್ದಾನೆ. ಕೈದಿಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರು ಪಡಿಸುವ ಸಂದರ್ಭದಲ್ಲಿ ಈ ಹೊಡೆದಾಟ ನಡೆದಿದೆ. ಗಾಯಗೊಂಡ ಕೈದಿ ಕೇಶವನನ್ನು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ.</p>.<p>ಹಲ್ಲೆಗೊಳಗಾದ ಕೈದಿ ಕೇಶವ ಪುತ್ತೂರಿನಲ್ಲಿ2023ರ ನವೆಂಬರ್ನಲ್ಲಿ ನಡೆದಿದ್ದ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ. ಆರೋಪಿ ಮಹಮದ್ ಮುಕ್ತಿಯಾರ್ 15 ಪ್ರಕರಣಗಳಲ್ಲಿ ಆರೋಪಿ. 2022ರ ಜುಲೈನಲ್ಲಿ ಕಾಲಿಗೆ ಗುಂಡಿಕ್ಕಿ ಆತನನ್ನು ಬಂಧಿಸಲಾಗಿತ್ತು.</p>.<p>ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ನಡುವೆ ತಿಂಗಳ ಹಿಂದಷ್ಟೇ ಹೊಡೆದಾಟ ನಡೆದಿತ್ತು. ಆ ಬಳಿಕ ಕಾರಾಗೃಹದ ಭದ್ರತೆ ಹೆಚ್ಚಿಸಲು ಕ್ರಮವಹಿಸಿದರೂ ಕೈದಿಗಳ ನಡುವಿನ ಹೊಡೆದಾಟ ಮರುಕಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಇಲ್ಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಗುರುವಾರ ಮತ್ತೆ ಹೊಡೆದಾಟ ನಡೆದಿದ್ದು, ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. </p>.<p>ಕೈದಿ ಮುಕ್ತಿಯರ್ ಎಂಬಾತ ಸಹ ಕೈದಿ ಕೇಶವ ಎಂಬಾತನ ಮೇಲೆ ಗುರುವಾರ ಮಧ್ಯಾಹ್ನ ಹಲ್ಲೆ ನಡೆಸಿದ್ದಾನೆ. ಕೈದಿಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರು ಪಡಿಸುವ ಸಂದರ್ಭದಲ್ಲಿ ಈ ಹೊಡೆದಾಟ ನಡೆದಿದೆ. ಗಾಯಗೊಂಡ ಕೈದಿ ಕೇಶವನನ್ನು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ.</p>.<p>ಹಲ್ಲೆಗೊಳಗಾದ ಕೈದಿ ಕೇಶವ ಪುತ್ತೂರಿನಲ್ಲಿ2023ರ ನವೆಂಬರ್ನಲ್ಲಿ ನಡೆದಿದ್ದ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ. ಆರೋಪಿ ಮಹಮದ್ ಮುಕ್ತಿಯಾರ್ 15 ಪ್ರಕರಣಗಳಲ್ಲಿ ಆರೋಪಿ. 2022ರ ಜುಲೈನಲ್ಲಿ ಕಾಲಿಗೆ ಗುಂಡಿಕ್ಕಿ ಆತನನ್ನು ಬಂಧಿಸಲಾಗಿತ್ತು.</p>.<p>ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ನಡುವೆ ತಿಂಗಳ ಹಿಂದಷ್ಟೇ ಹೊಡೆದಾಟ ನಡೆದಿತ್ತು. ಆ ಬಳಿಕ ಕಾರಾಗೃಹದ ಭದ್ರತೆ ಹೆಚ್ಚಿಸಲು ಕ್ರಮವಹಿಸಿದರೂ ಕೈದಿಗಳ ನಡುವಿನ ಹೊಡೆದಾಟ ಮರುಕಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>