<p><strong>ಮಂಗಳೂರು:</strong> ಕಾಂಕ್ರಿಟೀಕರಣಗೊಳ್ಳು ತ್ತಿರುವ ಕಂಕನಾಡಿ– ಪಂಪ್ವೆಲ್ ರಸ್ತೆಯ ಒಂದು ಭಾಗದ ಕಾಮಗಾರಿ ಪೂರ್ಣಗೊಂಡಿದ್ದು, ಜೂನ್ 10ಕ್ಕೆ ಸಂಚಾರಕ್ಕೆ ಮುಕ್ತಗೊಳ್ಳಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.</p>.<p>ಎಂಜಿನಿಯರ್ಗಳ ಜೊತೆಗೆ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ವೇಳೆ ಅವರು ಮಾತನಾಡಿದರು. ರಸ್ತೆಯ ಕಾಂಕ್ರಿಟೀಕರಣ ಮುಗಿದಿದ್ದು, ಬಾಕಿ ಇರುವ ಸಣ್ಣ ಕೆಲಸ, ಚರಂಡಿ ಸುಗಮಗೊಳಿಸಿ, ಸಂಚಾರಕ್ಕೆ ಬಿಟ್ಟು ಕೊಡು ವುದಾಗಿ ಗುತ್ತಿಗೆದಾರರು ತಿಳಿಸಿದ್ದು, ಇನ್ನೊಂದು ಭಾಗದ ಕಾಮಗಾರಿಯನ್ನು 3 ತಿಂಗಳ ಒಳಗೆ ಮುಗಿಸುವುದಾಗಿ ಹೇಳಿದ್ದಾರೆ. ಚರಂಡಿ, ಪಾದಚಾರಿ ಮಾರ್ಗ ಆಗಬೇಕಾಗಿದ್ದು, ಟೆಂಡರ್ ಕರೆಯಲಾಗಿದೆ ಎಂದರು.</p>.<p>ಯಾವುದೇ ಸಂದರ್ಭದಲ್ಲಿ ನೀರು ಅಂಗಡಿಗಳಿಗೆ ನುಗ್ಗುವುದು ಇಂತಹ ತೊಂದರೆಗಳು ಅಗಬಾರದೆಂದು ಎಂಜಿನಿಯರ್ಗಳಿಗೆ ನಿರ್ದೇಶನ ನೀಡಿದರು. ಒಳಚರಂಡಿ ಜೋಡಣೆ ಕೆಲಸ ಮಾಡ ಲಾಗಿದ್ದು, ತೊಂದರೆ ಆಗಲಾರದು ಎಂದು ಮಹಾನಗರ ಪಾಲಿಕೆಯ ಮುಖ್ಯ ಎಂಜಿನಿಯರ್ ನಾಗರಾಜ್ ಹೇಳಿದರು.</p>.<p>ಎಂಜಿನಿಯರ್ಗಳಾದ ಪ್ರೀತಮ್ , ಹೇಮಂತ್, ಪ್ರಮುಖರಾದ ಶಶಿಧರ್ ಹೆಗ್ಡೆ, ನವೀನ್ ಡಿಸೋಜ, ನಾಗೇಂದ್ರ ಕುಮಾರ್, ಭಾಸ್ಕರ್ ರಾವ್, ಅಪ್ಪಿ ಎಸ್, ಸತೀಶ್ ಪೆಂಗಲ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-29-2130971782</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕಾಂಕ್ರಿಟೀಕರಣಗೊಳ್ಳು ತ್ತಿರುವ ಕಂಕನಾಡಿ– ಪಂಪ್ವೆಲ್ ರಸ್ತೆಯ ಒಂದು ಭಾಗದ ಕಾಮಗಾರಿ ಪೂರ್ಣಗೊಂಡಿದ್ದು, ಜೂನ್ 10ಕ್ಕೆ ಸಂಚಾರಕ್ಕೆ ಮುಕ್ತಗೊಳ್ಳಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.</p>.<p>ಎಂಜಿನಿಯರ್ಗಳ ಜೊತೆಗೆ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ವೇಳೆ ಅವರು ಮಾತನಾಡಿದರು. ರಸ್ತೆಯ ಕಾಂಕ್ರಿಟೀಕರಣ ಮುಗಿದಿದ್ದು, ಬಾಕಿ ಇರುವ ಸಣ್ಣ ಕೆಲಸ, ಚರಂಡಿ ಸುಗಮಗೊಳಿಸಿ, ಸಂಚಾರಕ್ಕೆ ಬಿಟ್ಟು ಕೊಡು ವುದಾಗಿ ಗುತ್ತಿಗೆದಾರರು ತಿಳಿಸಿದ್ದು, ಇನ್ನೊಂದು ಭಾಗದ ಕಾಮಗಾರಿಯನ್ನು 3 ತಿಂಗಳ ಒಳಗೆ ಮುಗಿಸುವುದಾಗಿ ಹೇಳಿದ್ದಾರೆ. ಚರಂಡಿ, ಪಾದಚಾರಿ ಮಾರ್ಗ ಆಗಬೇಕಾಗಿದ್ದು, ಟೆಂಡರ್ ಕರೆಯಲಾಗಿದೆ ಎಂದರು.</p>.<p>ಯಾವುದೇ ಸಂದರ್ಭದಲ್ಲಿ ನೀರು ಅಂಗಡಿಗಳಿಗೆ ನುಗ್ಗುವುದು ಇಂತಹ ತೊಂದರೆಗಳು ಅಗಬಾರದೆಂದು ಎಂಜಿನಿಯರ್ಗಳಿಗೆ ನಿರ್ದೇಶನ ನೀಡಿದರು. ಒಳಚರಂಡಿ ಜೋಡಣೆ ಕೆಲಸ ಮಾಡ ಲಾಗಿದ್ದು, ತೊಂದರೆ ಆಗಲಾರದು ಎಂದು ಮಹಾನಗರ ಪಾಲಿಕೆಯ ಮುಖ್ಯ ಎಂಜಿನಿಯರ್ ನಾಗರಾಜ್ ಹೇಳಿದರು.</p>.<p>ಎಂಜಿನಿಯರ್ಗಳಾದ ಪ್ರೀತಮ್ , ಹೇಮಂತ್, ಪ್ರಮುಖರಾದ ಶಶಿಧರ್ ಹೆಗ್ಡೆ, ನವೀನ್ ಡಿಸೋಜ, ನಾಗೇಂದ್ರ ಕುಮಾರ್, ಭಾಸ್ಕರ್ ರಾವ್, ಅಪ್ಪಿ ಎಸ್, ಸತೀಶ್ ಪೆಂಗಲ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-29-2130971782</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>