<p><strong>ಮಂಗಳೂರು:</strong> ಇತ್ತೀಚೆಗೆ ಅಬುದಾಬಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಮಾಸ್ಟರ್ಸ್ ಗೇಮ್ಸ್ 2026ರಲ್ಲಿ ಮಂಗಳೂರಿನ ವಕೀಲ ಡಿ.ಪದ್ಮನಾಭ ಕುಮಾರ್ ಅವರು ಓಟ ಮತ್ತು ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿ ಒಂದು ಚಿನ್ನ, ಎರಡು ಬೆಳ್ಳಿ ಮತ್ತು ಒಂದು ಕಂಚಿನ ಪದಕ ಪಡೆದಿದ್ದಾರೆ. </p>.<p>ಕ್ರೀಡಾಕೂಟದಲ್ಲಿ ಭಾಗವಹಿಸಿದ ತಮ್ಮ ಅನುಭವವನ್ನು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹಂಚಿಕೊಂಡ ಪದ್ಮನಾಭ ಕುಮಾರ್, ‘125 ರಾಷ್ಟ್ರಗಳ ಸುಮಾರು 25 ಸಾವಿರ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ನಾನು 100, 200, 400 ಮೀ ಓಟ ಮತ್ತು ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದೆ. ಈ ಹಿಂದೆ 2014 ಮತ್ತು 2015ನೇ ಇಸವಿಯಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್ನಲ್ಲಿ ಚಾಂಪಿಯನ್ ಆಗಿದ್ದೆ. ಒಟ್ಟು ಎಂಟು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದೇನೆ. 2027ರಲ್ಲಿ ಜಪಾನ್ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಾಸ್ಟರ್ಸ್ ಗೇಮ್ಸ್ನಲ್ಲಿಯೂ ಭಾಗವಹಿಸುತ್ತೇನೆ’ ಎಂದರು. </p>.<p>ಸಚ್ಚಿದಾನಂದ ಕಾಮತ್, ಕೆ. ಭಾಸ್ಕರ್ ರಾವ್, ಮೀನಾ ಟೆಲ್ಲಿಸ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಇತ್ತೀಚೆಗೆ ಅಬುದಾಬಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಮಾಸ್ಟರ್ಸ್ ಗೇಮ್ಸ್ 2026ರಲ್ಲಿ ಮಂಗಳೂರಿನ ವಕೀಲ ಡಿ.ಪದ್ಮನಾಭ ಕುಮಾರ್ ಅವರು ಓಟ ಮತ್ತು ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿ ಒಂದು ಚಿನ್ನ, ಎರಡು ಬೆಳ್ಳಿ ಮತ್ತು ಒಂದು ಕಂಚಿನ ಪದಕ ಪಡೆದಿದ್ದಾರೆ. </p>.<p>ಕ್ರೀಡಾಕೂಟದಲ್ಲಿ ಭಾಗವಹಿಸಿದ ತಮ್ಮ ಅನುಭವವನ್ನು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹಂಚಿಕೊಂಡ ಪದ್ಮನಾಭ ಕುಮಾರ್, ‘125 ರಾಷ್ಟ್ರಗಳ ಸುಮಾರು 25 ಸಾವಿರ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ನಾನು 100, 200, 400 ಮೀ ಓಟ ಮತ್ತು ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದೆ. ಈ ಹಿಂದೆ 2014 ಮತ್ತು 2015ನೇ ಇಸವಿಯಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್ನಲ್ಲಿ ಚಾಂಪಿಯನ್ ಆಗಿದ್ದೆ. ಒಟ್ಟು ಎಂಟು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದೇನೆ. 2027ರಲ್ಲಿ ಜಪಾನ್ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಾಸ್ಟರ್ಸ್ ಗೇಮ್ಸ್ನಲ್ಲಿಯೂ ಭಾಗವಹಿಸುತ್ತೇನೆ’ ಎಂದರು. </p>.<p>ಸಚ್ಚಿದಾನಂದ ಕಾಮತ್, ಕೆ. ಭಾಸ್ಕರ್ ರಾವ್, ಮೀನಾ ಟೆಲ್ಲಿಸ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>