ಎರಡನೇ ದಿನದ ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ, ಅರವಿಂದ ಚೊಕ್ಕಾಡಿ ಮತ್ತು ಅಶ್ವಿನಿ ದೇಸಾಯಿ ಪಠ್ಯ ವಿಮರ್ಶೆ ಕೈಗೊಳ್ಳುವರು. ‘ಕನ್ನಡಿಗರ ಕಣ್ಣಲ್ಲಿ ಸಾಂಸ್ಕೃತಿಕ ಭಾರತ’ ಕುರಿತು ಡಾ. ಜೆ.ಬಿ.ಹರೀಶ, ಡಾ. ನಿರಂಜನ ವಾನಳ್ಳಿ ಮತ್ತು ಜಿ.ಆರ್.ಸಂತೋಷ್, ‘ಕಶ್ಮೀರ್ ಫೈಲ್ಸ್ ರೀಲ್ ಮತ್ತು ರಿಯಲ್’ ಕುರಿತು ಕಲಾವಿದ ಪ್ರಕಾಶ್ ಬೆಳವಾಡಿ, ‘ನಾಗರಿಕತೆಯ ನಿರೂಪಣೆ’ ಕುರಿತು ನಿತಿನ್ ಶ್ರೀಧರ್, ಸಾಯಿಸ್ವರೂಪ ಅಯ್ಯರ್, ಗಣತ್ರ ಸಮಾಲೋಚಿಸುವರು ಎಂದು ಸಂಘಟಕರು ತಿಳಿಸಿದ್ದಾರೆ.