ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದ ಫೌಂಡೇಷನ್ನ ಟ್ರಸ್ಟಿ ಸುನಿಲ್ ಕುಲಕರ್ಣಿ, ‘ಭಾರತದ ಪರಿಕಲ್ಪನೆ’ ಎಂಬ ಧ್ಯೇಯದಲ್ಲಿ ನಡೆಯುವ ಈ ಸಾಹಿತ್ಯ ಹಬ್ಬದಲ್ಲಿ ಸಿನಿಮಾ ನಿರ್ದೇಶಕ ರಿಷಬ್ ಶೆಟ್ಟಿ, ನಟ ಪ್ರಕಾಶ್ ಬೆಳವಾಡಿ, ಸ್ಮಿತಾ ಪ್ರಕಾಶ್, ಶಿವ್ ಆರೂರ್, ರಂಗಕರ್ಮಿಗಳಾದ ಅಡ್ಡಂಡ ಕಾರ್ಯಪ್ಪ, ಬಾಸುಮಾ ಕೊಡಗು, ದಕ್ಕಲ ಮುನಿಸ್ವಾಮಿ ಸೇರಿದಂತೆ 55ಕ್ಕೂ ಹೆಚ್ಚು ವಾಗ್ಮಿಗಳು ಭಾಗವಹಿಸಲಿದ್ದಾರೆ' ಎಂದರು.