ಮಂಗಳೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುವ ವಾಹನಗಳನ್ನು ಪೊಲೀಸರು ಹಿಡಿದಿರುವುದು ಹಾಗೂ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಮೇಯರ್ ದಿವಾಕರ ಪಾಂಡೇಶ್ವರ ನೇತೃತ್ವದಲ್ಲಿ ಅಧಿಕಾರಿಗಳು ಬುಧವಾರ ಬೆಳಿಗ್ಗೆ ನಗರದ ವಿವಿಧ ಮಾರುಕಟ್ಟೆಗಳಿಗೆ ತೆರಳಿ ಪರಿಶೀಲಿಸಿದರು.
ಉರ್ವಸ್ಟೋರ್, ಉರ್ವ ಮಾರ್ಕೆಟ್ಗಳಲ್ಲಿ ಕಸಾಯಿಖಾನೆ, ಮಾಂಸದ ಅಂಗಡಿಗಳನ್ನು ಪರಿಶೀಲಿಸಲಾಯಿತು. ಅಕ್ರಮವಾಗಿ ಮಾರಾಟ ಕಂಡುಬಂದಲ್ಲಿ ಪರವಾನಗಿ ರದ್ದು ಮಾಡುವ ಎಚ್ಚರಿಕೆ ನೀಡಲಾಗಿದೆ.
ಸ್ಥಾಯಿ ಸಮಿತಿ ಅಧ್ಯಕ್ಷರಾದ ಪೂರ್ಣಿಮಾ, ಕಿರಣ್ ಕುಮಾರ್, ಪಾಲಿಕೆ ಸದ್ಯಸರಾದ ಸುಧೀರ್ ಶೆಟ್ಟಿ ಹಾಗೂ ಅಧಿಕಾರಿಗಳು ಇದ್ದರು.